Advertisement
ರಾಷ್ಟ್ರೀಯ

ಪ್ರಾಣಿಗಳಿಗೂ ಬಂದಿದೆ ಭಾರತದ ಸ್ವದೇಶಿ ಕೋವಿಡ್ ಲಸಿಕೆ……!

Share

ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್  ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್  ಬಿಡುಗಡೆ ಮಾಡಿದ್ದಾರೆ.

ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್‌, ರೂಪಾಂತರ ವೈರಸ್‌ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.

ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್‌ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್‌ ಹೇಳಿದರು.

ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

4 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

4 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

11 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

13 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

20 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

22 hours ago