ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…