ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…