Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

Share

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಯಮ ಪಾಲಿಸಲು ಜಿಲ್ಲಾಡಳಿತ ಸೂಚಿಸಿದೆ.

ಹೊಸ ವರ್ಷಾಚರಣೆ ವೇಳೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.

ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು.

ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 minutes ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

38 minutes ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

3 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

14 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago