Advertisement
ಸುದ್ದಿಗಳು

ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

Share

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಯಮ ಪಾಲಿಸಲು ಜಿಲ್ಲಾಡಳಿತ ಸೂಚಿಸಿದೆ.

ಹೊಸ ವರ್ಷಾಚರಣೆ ವೇಳೆ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.

ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು.

ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

11 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

20 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago