ಕೊರೋನಾ ಎಲರ್ಟ್‌ | ದ ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ | ಎಚ್ಚರ ವಹಿಸಲು ಉಸ್ತುವಾರಿ ಸಚಿವರಿಂದ ಮನವಿ |

March 29, 2021
10:13 PM

ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವಿಕೆ,  ಸ್ವಚ್ಚತೆ ಹಾಗೂ ಕೋವಿಡ್ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜನತೆಗೆ ಮನವಿ ಮಾಡಿದ್ದಾರೆ.

 

Advertisement

ಕೊರೋನಾ ಮುಂಜಾಗ್ರತೆಗಾಗಿ  ನಗರದ  ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಾರದ 7 ದಿನಗಳಲ್ಲೂ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 1 ಗಂಟೆಯವರೆಗೆ ಉಚಿತ ಲಸಿಕೆಯನ್ನು ನೀಡಲಾಗುತ್ತಿದೆ. ನಗರ ಪ್ರದೇಶವೂ ಸೇರಿದಂತೆ 78 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಾರದಲ್ಲಿ 4 ದಿನ ಅಂದರೆ ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ಲಸಿಕೆ ಕೊಡಲಾಗುವುದು . ಇದನ್ನು ಹೊರತುಪಡಿಸಿ 8 ಮೆಡಿಕಲ್ ಕಾಲೇಜುಗಳೂ ಸೇರಿದಂತೆ 33  ಖಾಸಗಿ ಆಸ್ಪತ್ರೆ/ ನರ್ಸಿಂಗ್ ಹೋಂ ಗಳಲ್ಲಿ ಕೂಡ ಲಸಿಕೆ ಕೊಡುವ ಕಾರ್ಯಕ್ರಮ ಇದ್ದು  ಪ್ರತೀ ಡೋಸ್‍ಗೆ ರೂ 250 ಪಡೆದು ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ 60 ವರ್ಷ  ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ  ಮತ್ತು 45 ರಿಂದ 59 ವರ್ಷದ ವಯಸ್ಸಿನ  ಕೋ-ಮಾರ್ಬಿಡಿಟಿಸ್ ಇರುವ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುವುದು. ಆದರೆ ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು.

Advertisement
ಕೋವಿಡ್‌ ಶಿಷ್ಟಾಚಾರ ಪಾಲಿಸಿ
ಎಲ್ಲಾ ಸಭೆ ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ಶಿಷ್ಟಾಚಾರ ಪಾಲನೆ ಮಾಡಬೇಕು. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್‍ಡೌನ್ ಸಾಧ್ಯತೆ ತಪ್ಪಿಸಲು ಕೋವಿಡ್ ಮಾರ್ಗಸೂಚಿ ಪಾಲನೆಯೊಂದೇ ಏಕೈಕ ಮಾರ್ಗವಾಗಿದ್ದು, ಎಲ್ಲರೂ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿಕೊಂಡಿರುತ್ತಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror