ಕೋವಿಡ್ ನಿಯಂತ್ರಣ ಕಾರ್ಯಗಳನ್ನು ವಾರ್ಡ್ ಹಾಗೂ ಗ್ರಾಮಮಟ್ಟದ ಸಮಿತಿಗಳು ಪರಿಣಾಮಕಾರಿಯಾಗಿ ಮಾಡಿದಾಗ ಮಾತ್ರ ಸೋಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಕೋಟೆಕಾರ್ ಪಟ್ಟಣ ಪಂಚಾಯತ್ನ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋವಿಡ್ ಸೋಂಕಿತರನ್ನು ಸಾಧ್ಯವಾದಷ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಹಿಸಬೇಕು, ಸೋಂಕು ತೀವ್ರ ಉಲ್ಭಣಗೊಂಡವರಿಗೆ ಆಸ್ಪತ್ರೆಗೆ ಸೇರಿಸಬೇಕು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಕ್ಷೇಮವನ್ನು ಸಮಿತಿಯ ಸದಸ್ಯರುಗಳು ಪ್ರತೀ ದಿನ ವಿಚಾರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಹೋಮ್ ಕ್ವಾರಂಟೈನ್ನಲ್ಲಿರುವ ಸೋಂಕಿತರ ಮನೆಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹಾಗೂ ವಾರ್ಡ್ ಹಾಗೂ ಗ್ರಾಮ ಮಟ್ಟದ ಸಮಿತಿಯ ಸದಸ್ಯರುಗಳು ಸಹ ಭೇಟಿ ನೀಡಿ ಅವರ ಆರೋಗ್ಯದ ಸ್ಥಿತಿಗತಿಗಳನ್ನು ನೋಡುವುದರ ಜೊತೆಗೆ ಅವರ ದೈನಂದಿನ ಅವಶ್ಯಕತೆಗಳಾದ ಆಹಾರ ಸಾಮಾಗ್ರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಪೂರೈಕೆ ಮಾಡುವುದರೊಂದಿಗೆ ಸೋಂಕಿತರು ಹೊರಗಡೆ ಅಡ್ಡಾಡದಂತೆ ತಡೆಯಲು ಸಾಧ್ಯ, ಅಂತಹಾ ಮನೆಗಳನ್ನು ಸೀಲ್ ಡೌನ್ ಮಾಡಬೇಕು ಎಂದರು.
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೋಡಲ್ ಅಧಿಕಾರಿ, ಸ್ಥಳೀಯ ಕೌನ್ಸಿಲರ್ ಹಾಗೂ ವಾರ್ಡ್ ಸದಸ್ಯರಿರುವ ತಂಡದಿಂದ ವಾರ್ಡ್ ಸಮೀಕ್ಷೆ ಮಾಡುವ ಕೆಲಸಗಳು ನಡೆಯಬೇಕು ಎಂದ ಅವರು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿರುವ ಗುಣಮಟ್ಟದ ಪಲ್ಸ್ ಆಕ್ಸಿ ಮೀಟರ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ಕೈಗವಸುಗಳ ಬಗ್ಗೆ ವಿಚಾರಿಸಿ ತುರ್ತು ಸಮಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಓಡಾಡಲು ವಾಹನದ ವ್ಯವಸ್ಥೆಯ ಅಗತ್ಯವಿದ್ದರೆ ಪಟ್ಟಣ ಪಂಚಾಯತ್ ವತಿಯಿಂದ ಒದಗಿಸಬೇಕು ಎಂದು ಸೂಚಿಸಿದರು.
ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಆಹಾರ ಸಾಮಾಗ್ರಿಗಳ ಅಗತ್ಯವಿರುವುದರಿಂದ ಅಂತವರಿಗೆ ಧಾನಿಗಳು ಅಥವಾ ಸಂಘಸಂಸ್ಥೆಗಳ ನೆರವಿನಿಂದ ಸಹಾಯ ಮಾಡುವ ಕಾರ್ಯ ಆಗಬೇಕು ಇನ್ನೂ ಹೆಚ್ಚಿನ ಅಗತ್ಯತೆ ಇದ್ದಲ್ಲಿ ಜಿಲ್ಲಾಡಳಿತವು ನೆರವು ನೀಡಲಿದೆ ಎಂದರು.
ಪಡಿತರ ಚೀಟಿ ಬಗ್ಗೆ ಮಾತನಾಡಿದ ಸಚಿವರು 5 ಲಕ್ಷಕ್ಕಿಂತ ಮೇಲ್ಪಟ್ಟು ಆದಾಯ ಹೊಂದಿ ಆದಾಯ ತೆರಿಗೆ ಪಾವತಿ ಮಾಡುವವರನ್ನು ಹೊರತು ಪಡಿಸಿ ಉಳಿದವರಿಗೆ ಬಿ.ಪಿ.ಎಲ್ ಕಾರ್ಡ್ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಅಲೇಮಾರಿ ಜನಾಂಗದ ಅಧ್ಯಕ್ಷ ರವೀಂದ್ರ ಶೇಟ್, ಕೋಟೆಕಾರ್ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಪ್ರಫುಲ್ಲಾ ದಾಸ್, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ತಹಶೀಲ್ದಾರು, ಆಶಾಕಾರ್ಯಕರ್ತೆಯರು ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್…
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…