Advertisement
ಸುದ್ದಿಗಳು

ಕೊರೋನಾ ನಿಯಂತ್ರಣ | ದ ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರು ಸೂಚನೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ಕೊರೋನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೊರೋನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳನ್ನು ಕಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ ಕೋವಿಡ್  ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ಮಾಡಿ, ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಿ, ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರಿಗೂ ಸಹ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರು ಕೋವಿಡ್ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಮಾಲ್‍ಗಳಲ್ಲಿ, ಪೆಟ್ರೋಲ್ ಬಂಕ್ ಸೇರಿದಂತೆ ಮತ್ತಿತರ ವಾಣಿಜ್ಯ ಚಟುವಟಿಕೆದಾರರು ತಮ್ಮ ಗ್ರಾಹಕರಿಗೆ ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರಿಸಬೇಕು.  ರಾತ್ರಿ ಕಫ್ರ್ಯೂ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕೇರಳ ಗಡಿಯಲ್ಲಿ ಕೊರೋನಾ ನೆಗೆಟಿವ್ ರಿಪೋರ್ಟ್‍ನ ತಪಾಸಣೆ ಸೇರಿದಂತೆ ಮತ್ತಿತರ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಾದ್ಯಂತ ಬಿಗಿಗೊಳಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೋನಾ ಸೋಂಕಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದ ಅವರು ಸಭೆ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಪಾಲಿಸಬೇಕು ಇವುಗಳ ಮೇಲುಸ್ತುವಾರಿಯನ್ನು ಸ್ಥಳೀಯ ಸಂಸ್ಥೆಗಳು, ಪೋಲಿಸ್ ಇಲಾಖೆ ಮಾಡಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ, ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಸಿಡಿಪಿಓಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

3 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

10 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

10 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

18 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

18 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

19 hours ago