ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ | ಶಾಲೆ, ಚಿತ್ರಮಂದಿರದಲ್ಲಿ ಮಾಸ್ಕ್‌ ಕಡ್ಡಾಯ |

December 26, 2022
9:46 PM

ಕೋವಿಡ್‌ ನಿಯಂತ್ರಣಕ್ಕೆ  ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸದ್ಯ ಶಾಲಾ-ಕಾಲೇಜು, ಚಿತ್ರಮಂದಿರ ಸೇರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಿದೆ. ಕೋವಿಡ್‌ ಆರಂಭದಲ್ಲಿಯೇ ನಿಯಂತ್ರಣಾ ಕ್ರಮಗಳ ಕಡೆಗೆ ಹೆಜ್ಜೆ ಇರಿಸಲಾಗಿದೆ.

Advertisement
Advertisement
Advertisement
Advertisement

ಕೋವಿಡ್ ಪರಿಶೀಲನಾ ಸಭೆಯ ನಂತರ ಮಾಧ್ಯಮಳೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು , ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

Advertisement

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, ‘ಚಲನಚಿತ್ರ ಮಂದಿರಗಳು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮಾಸ್ಕ್‌ ಗಳನ್ನು ಕಡ್ಡಾಯಗೊಳಿಸಲಾಗಿದೆ. ಪಬ್, ರೆಸ್ಟೋರೆಂಟ್ ಗಳು ಮತ್ತು ಬಾರ್ ಗಳಲ್ಲಿ ಹೊಸ ವರ್ಷವನ್ನು ಆಚರಿಸಲು ಮಾಸ್ಕ್ ಕಡ್ಡಾಯವಾಗಿರುತ್ತದೆ.ಹೊಸ ವರ್ಷದ ಆಚರಣೆಗಳು ಬೆಳಿಗ್ಗೆ 1 ಗಂಟೆಯೊಳಗೆ ಕೊನೆಗೊಳ್ಳುತ್ತವೆ.  ಕೋವಿಡ್ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಬೆಂಗಳೂರಿಗೆ ಹೊಸ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಏರ್‌ ಪೋರ್ಟ್‌ ಗಳಲ್ಲಿ ಆರ್ ಟಿಪಿಆರ್‌ ತಪಾಸಣೆಗೆ ಸೂಚನೆ ನೀಡಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಏರ್‌ ಪೋರ್ಟ್‌ ನಲ್ಲಿ ಕೋವಿಡ್‌ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಎರಡು ಆಸ್ಪತ್ರೆಗೆ ಮೀಸಲಿಡಲಾಗಿದೆ. ರಾಜ್ಯದಲ್ಲಿ ಮತ್ತೆ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಜಿಲ್ಲಾಮಟ್ಟದಿಂದ ಗ್ರಾಮಪಂಚಾಯತ್ ಮಟ್ಟದಲ್ಲಿ ಲಸಿಕಾ ಕೇಂದ್ರ ಆರಂಭಿಸಲಾಗಿದೆ.‌ ಲಸಿಕೆ ಹಾಕಿಸಿಕೊಳ್ಳದವರು ಕೂಡಲೇ ಲಸಿಕೆ ಹಾಕಿಸಿಕೊಳ್ಳಬೇಕು. ಬೂಸ್ಟರ್‌ ಡೋಸ್ ಲಸಿಕೆ ಹಾಕಿಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror