ಪ್ರಾಣಿಗಳಿಗೂ ಕೋವಿಡ್ ಲಸಿಕೆ | ಪ್ರಯೋಗಕ್ಕಾಗಿ ಐದು ಮೃಗಾಲಯಗಳ ಆಯ್ಕೆ..! |

January 23, 2022
12:01 PM

ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್‌ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.

ಹರಿಯಾಣದ ಹಿಸಾರ್‌ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.

ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್‌ಆರ್‌ಸಿಇ ಗೆ ನಿರ್ದೇಶನವನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror