ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.
ಹರಿಯಾಣದ ಹಿಸಾರ್ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.
ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್ಆರ್ಸಿಇ ಗೆ ನಿರ್ದೇಶನವನ್ನು ನೀಡಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…