Advertisement
MIRROR FOCUS

ಕೊರೋನಾ ಲಸಿಕೆ ಪರಿಣಾಮದ ಬಗ್ಗೆ ಅಧ್ಯಯನ ವರದಿ ಬಿಡುಗಡೆ | 65+ ವಯಸ್ಸಿನ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳ |

Share

ಕೊರೋನಾ ಲಸಿಕೆಯ ಬಗ್ಗೆ ಅಮೇರಿಕಾದ ರೋಗ ನಿಯಂತ್ರಣ ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ನಡೆಸಿದ ಫೆಡರಲ್‌ ಸ್ಟಡಿಯ ವರದಿಯ ಪ್ರಕಾರ ಕೊರೋನಾ ಲಸಿಕೆ ಹಾಕಿಸಿಕೊಂಡ ವಯಸ್ಕರಲ್ಲಿ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವನ್ನು  ತಗ್ಗಿಸಿದೆ ಎಂದು ಸಾಬೀತಾಗಿದೆ. ವಯಸ್ಕರಲ್ಲಿ  ಕೊರೋನಾ ಪಾಸಿಟಿವ್‌ ಕಂಡುಬಂದರೂ ಹಿರಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಶೇ.94ರಷ್ಟು ಕಡಿಮೆ ಎನ್ನುವುದು  ವರದಿಯಲ್ಲಿ ಕಂಡುಬಂದಿರುವ ಅಂಶ.

Advertisement
Advertisement
Advertisement
Advertisement

ಅಮೇರಿಕಾದ ರೋಗ ನಿಯಂತ್ರಣ ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ನಡೆಸಿದ ಫೆಡರಲ್‌ ಸ್ಟಡಿ ಇದಾಗಿದ್ದು, ಕೊರೋನಾ ಲಸಿಕೆ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ, ಇದು ಸೋಂಕು ನಿರೋಧಕವಾಗಿಯೂ ಕಾರ್ಯನಿರ್ವಹಿಸುತ್ತದೆ. ಲಸಿಕೆಗಳ ಪರೀಕ್ಷೆಯ ವೇಳೆ ಇದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.

Advertisement

ಸಿಡಿಸಿಯ ಅಧ್ಯಯನ ವರದಿ ಪ್ರಕಾರ, ಕೊರೋನಾ ಲಸಿಕೆಗಳು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಲ್ಲಿ ಶೇಕಡಾ 94 ರಷ್ಟು ಪರಿಣಾಮಕಾರಿ, ಅವರು ಎರಡೂ ಡೋಸ್ ಪಡೆದಿದ್ದಾರೆ ಮತ್ತು ಎರಡನೇ ಡೋಸ್ ನಂತರ 14 ದಿನಗಳ ನಂತರವೂ ಪರಿಶೀಲನೆ ಮಾಡಲಾಗಿದೆ. ಜನವರಿಯಿಂದ ಮಾರ್ಚ್ ವರೆಗೆ 14 ರಾಜ್ಯಗಳಲ್ಲಿ 400 ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾದ ವಯಸ್ಕರನ್ನು ಈ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕಾರ ಕೊರೋನಾದ ಎರಡು ಡೋಸ್‌ಗಳನ್ನು ಪಡೆದ 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರಲ್ಲಿ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ ಕಂಡುಬಂದಿದ್ದು, ಒಂದು ಡೋಸ್‌‌ ಪಡೆದು ಕೊರೋನಾ ಸೋಂಕಿಗೆ ಒಳಗಾದವರ ಪೈಕಿ ಈ ಪ್ರಮಾಣ ಶೇ.64ರಷ್ಟು ಇರುತ್ತದೆ ಎಂದು  ಉಲ್ಲೇಖಿಸಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

3 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

18 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

18 hours ago