Advertisement
MIRROR FOCUS

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

Share

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೋವಿಡ್ ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಸಂಭವಿಸಿವೆ ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಯುವಜನರೂ ಸೇರಿದಂತೆ ಹೃದಯಾಘಾತದಿಂದ ಹಠಾತ್ ಸಾವುಗಳು ಸಂಭವಿಸುತ್ತಿರುವುದರ ಕುರಿತು ಪರಿಣತರ ತಂಡ ಅಧ್ಯಯನ ನಡೆಸಿ ವರದಿ ನೀಡಿದೆ. ಹೃದಯಾಘಾತಕ್ಕೆ ಧೂಮಪಾನ, ಆಹಾರ ಹಾಗೂ ಜೀವನಶೈಲಿ, ಮಾಲಿನ್ಯ, ಆರೋಗ್ಯ ಸ್ಥಿತಿಗತಿ,  ಹೃದಯದ ಆರೋಗ್ಯ ಮೇಲೆ ಪ್ರಭಾವ ಬೀರಿವೆ ಎನ್ನುವ ಸಂಗತಿಯನ್ನು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಉಳಿದ ಭಾಗಗಳಿಗಿಂತ ಹೆಚ್ಚಿನ ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಸರ್ಕಾರ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಹೃದಯದ ಆರೋಗ್ಯ ಸಂಬಂಧ ಅರಿವು ಮೂಡಿಸಲಾಗುವುದು. ಹಠಾತ್ ಸಾವುಗಳನ್ನು ಗುರುತಿಸಿ ಮರಣೋತ್ತರ ಪರೀಕ್ಷೆಗೆ ಕ್ರಮ ವಹಿಸಲಾಗುವುದು, 15 ವರ್ಷ ಒಳಪಟ್ಟ ಮಕ್ಕಳಿಗೆ ಹೃದಯ ತಪಾಸಣೆಗೆ ಒತ್ತು ನೀಡುವ ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳು ವರ್ಷಕ್ಕೆ ಒಮ್ಮೆಯಾದರೂ ತಮ್ಮೆಲ್ಲ ಉದ್ಯೋಗಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

7 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

7 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

8 hours ago