ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

May 26, 2025
11:21 PM
ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.  ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು  ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.  ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು  ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.  ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.  ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror