ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು,ಎರಡು ದಿನ ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಸಂಭವನೀಯ ಅಪಾಯವನ್ನು ಎದುರಿಸಲು ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳ ಮೂಲಕ ರಾಜ್ಯದ ಸನ್ನದ್ಧತೆಯನ್ನು ತಿಳಿಯಲು ಇಂದು ಏಪ್ರಿಲ್ 10 ಮತ್ತು ನಾಳೆ ಏಪ್ರಿಲ್ 11 ರಂದು ಆರೋಗ್ಯ ಇಲಾಖೆ ಅಣಕು ಕಾರ್ಯಾಚರಣೆ ಹಮ್ಮಿಕೊಂಡಿದೆ.
ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಖಚಿತತೆಗಾಗಿ ಕಾರ್ಯಕ್ರಮ ಸರ್ಕಾರಿ ಆಸ್ಪತ್ರೆಗಳಲ್ಲಿ ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆರೋಗ್ಯ ಸಿಬ್ಬಂದಿ (ಮಾನವಶಕ್ತಿ), ಆಂಬ್ಯುಲೆನ್ಸ್ಗಳು, ಅಗತ್ಯ ಔಷಧಗಳು, ಮಾಸ್ಕ್ಗಳು, ಪಿಪಿಇ ಕಿಟ್ಗಳು, ಟೆಲಿಮೆಡಿಸಿನ್ ಸೇವೆಗಳು ಮತ್ತು ಆಮ್ಲಜನಕ ಸಿಲಿಂಡರ್ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಇದಾಗಿದೆ.
ಏಪ್ರಿಲ್ 10 ಮತ್ತು 11 ರಂದು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದ ಅಣಕು ಡ್ರಿಲ್ ನ್ನು ನಮ್ಮ ರಾಜ್ಯದಲ್ಲೂ ಕೈಗೊಳ್ಳಲಾಗುತ್ತಿದೆ. ಈ ಮೂಲಕ ತುರ್ತು ಸಂದರ್ಭದಲ್ಲಿ, ಇಲ್ಲವೇ ದಿಢೀರ್ ಕೊರೊನಾ ಏರಿಕೆ ಆದರೂ ಕರ್ನಾಟಕ ಆರೋಗ್ಯ ಇಲಾಖೆ ಎದುರಿಸಲು ಸಿದ್ಧ ಎಂದು ತೋರ್ಪಡಿಸುತ್ತಿದೆ ಎಂದು ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕ ನವೀನ್ ಭಟ್ ವೈ ತಿಳಿಸಿದ್ದಾರೆ.
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…