Advertisement
ರಾಷ್ಟ್ರೀಯ

ಕೋವಿಡ್ ಸೋಂಕಿನಲ್ಲಿ ಏರಿಕೆ | ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಅಣಕು ಪ್ರದರ್ಶನ | ಆರೋಗ್ಯ ಇಲಾಖೆ

Share

ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ  ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು,ಎರಡು ದಿನ  ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಸಂಭವನೀಯ ಅಪಾಯವನ್ನು ಎದುರಿಸಲು ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳ ಮೂಲಕ ರಾಜ್ಯದ ಸನ್ನದ್ಧತೆಯನ್ನು ತಿಳಿಯಲು ಇಂದು ಏಪ್ರಿಲ್ 10 ಮತ್ತು ನಾಳೆ ಏಪ್ರಿಲ್ 11 ರಂದು ಆರೋಗ್ಯ ಇಲಾಖೆ ಅಣಕು ಕಾರ್ಯಾಚರಣೆ ಹಮ್ಮಿಕೊಂಡಿದೆ.

ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಆರೋಗ್ಯ ಸೌಲಭ್ಯಗಳ ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಖಚಿತತೆಗಾಗಿ ಕಾರ್ಯಕ್ರಮ ಸರ್ಕಾರಿ ಆಸ್ಪತ್ರೆಗಳಲ್ಲಿ ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆರೋಗ್ಯ ಸಿಬ್ಬಂದಿ (ಮಾನವಶಕ್ತಿ), ಆಂಬ್ಯುಲೆನ್ಸ್‌ಗಳು, ಅಗತ್ಯ ಔಷಧಗಳು, ಮಾಸ್ಕ್‌ಗಳು, ಪಿಪಿಇ ಕಿಟ್‌ಗಳು, ಟೆಲಿಮೆಡಿಸಿನ್ ಸೇವೆಗಳು ಮತ್ತು ಆಮ್ಲಜನಕ ಸಿಲಿಂಡರ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಇದಾಗಿದೆ.

ಏಪ್ರಿಲ್ 10 ಮತ್ತು 11 ರಂದು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದ ಅಣಕು ಡ್ರಿಲ್ ನ್ನು ನಮ್ಮ ರಾಜ್ಯದಲ್ಲೂ ಕೈಗೊಳ್ಳಲಾಗುತ್ತಿದೆ. ಈ ಮೂಲಕ ತುರ್ತು ಸಂದರ್ಭದಲ್ಲಿ, ಇಲ್ಲವೇ ದಿಢೀರ್ ಕೊರೊನಾ ಏರಿಕೆ ಆದರೂ ಕರ್ನಾಟಕ ಆರೋಗ್ಯ ಇಲಾಖೆ ಎದುರಿಸಲು ಸಿದ್ಧ ಎಂದು ತೋರ್ಪಡಿಸುತ್ತಿದೆ ಎಂದು ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕ ನವೀನ್ ಭಟ್ ವೈ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago