ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್ ಮಣಲೂರು ಕುಂದುಕುಲಂನಲ್ಲಿ ನಡೆದಿದೆ. ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.
ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ ಹಸುವಿನ ಕಾಲು ತುಂಡಾಗಿರುವುದು ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು. ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ ಬ್ಯಾಂಡೆಜ್ ಹಾಕಿದ್ದರು.
ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್ಕ್ಯಾಟ್ ಅರ್ಥೋಟಿಕ್ಸ್ ಸೆಂಟರ್ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.
ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್ ಕುಟುಂಬ ಹೇಳಿದೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…