ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್ ಮಣಲೂರು ಕುಂದುಕುಲಂನಲ್ಲಿ ನಡೆದಿದೆ. ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.
ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ ಹಸುವಿನ ಕಾಲು ತುಂಡಾಗಿರುವುದು ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು. ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ ಬ್ಯಾಂಡೆಜ್ ಹಾಕಿದ್ದರು.
ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್ಕ್ಯಾಟ್ ಅರ್ಥೋಟಿಕ್ಸ್ ಸೆಂಟರ್ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.
ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್ ಕುಟುಂಬ ಹೇಳಿದೆ.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…