ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್ ಮಣಲೂರು ಕುಂದುಕುಲಂನಲ್ಲಿ ನಡೆದಿದೆ. ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.
ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ ಹಸುವಿನ ಕಾಲು ತುಂಡಾಗಿರುವುದು ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು. ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ ಬ್ಯಾಂಡೆಜ್ ಹಾಕಿದ್ದರು.
ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್ಕ್ಯಾಟ್ ಅರ್ಥೋಟಿಕ್ಸ್ ಸೆಂಟರ್ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.
ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್ ಕುಟುಂಬ ಹೇಳಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…