Advertisement
ರಾಷ್ಟ್ರೀಯ

ಅಂಗವಿಕಲ ಹಸುವಿಗೆ ಕೃತಕ ಕಾಲು ಜೋಡಣೆ | ತ್ರಿಶೂರ್‌ ನಲ್ಲಿ ಮಾನವೀಯತೆಯ ಕಥೆ |

Share

ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು  ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್‌  ಮಣಲೂರು ಕುಂದುಕುಲಂನಲ್ಲಿ ನಡೆದಿದೆ.  ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ  ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.

ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ  ಹಸುವಿನ ಕಾಲು ತುಂಡಾಗಿರುವುದು  ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು.  ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ  ಬ್ಯಾಂಡೆಜ್‌ ಹಾಕಿದ್ದರು.

ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್‌ಕ್ಯಾಟ್ ಅರ್ಥೋಟಿಕ್ಸ್  ಸೆಂಟರ್‌ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ  ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.

ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್‌ ಕುಟುಂಬ ಹೇಳಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago