ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್ ಮಣಲೂರು ಕುಂದುಕುಲಂನಲ್ಲಿ ನಡೆದಿದೆ. ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.
ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ ಹಸುವಿನ ಕಾಲು ತುಂಡಾಗಿರುವುದು ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು. ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ ಬ್ಯಾಂಡೆಜ್ ಹಾಕಿದ್ದರು.
ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್ಕ್ಯಾಟ್ ಅರ್ಥೋಟಿಕ್ಸ್ ಸೆಂಟರ್ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.
ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್ ಕುಟುಂಬ ಹೇಳಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…