Advertisement
ರಾಷ್ಟ್ರೀಯ

ಅಂಗವಿಕಲ ಹಸುವಿಗೆ ಕೃತಕ ಕಾಲು ಜೋಡಣೆ | ತ್ರಿಶೂರ್‌ ನಲ್ಲಿ ಮಾನವೀಯತೆಯ ಕಥೆ |

Share

ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು  ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್‌  ಮಣಲೂರು ಕುಂದುಕುಲಂನಲ್ಲಿ ನಡೆದಿದೆ.  ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ  ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.

ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ  ಹಸುವಿನ ಕಾಲು ತುಂಡಾಗಿರುವುದು  ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು.  ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ  ಬ್ಯಾಂಡೆಜ್‌ ಹಾಕಿದ್ದರು.

ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್‌ಕ್ಯಾಟ್ ಅರ್ಥೋಟಿಕ್ಸ್  ಸೆಂಟರ್‌ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ  ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.

ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್‌ ಕುಟುಂಬ ಹೇಳಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago