ಜಾನುವಾರುಗಳಲ್ಲಿ ಬ್ರೂಸೆಲ್ಲೋಸಿಸ್ ಅಂದರೆ ಕಂದು ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಬ್ರೂಸೆಲ್ಲಾ ವ್ಯಾಕ್ಸಿನ್ ಎಂಬ ಲಸಿಕೆ ಅಭಿಯಾನವನ್ನು ಮೇ 15ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 1,480 ಕರುಗಳಿಗೆ ಲಸಿಕೆ ಹಾಕಲಾಗಿದೆ. ದ.ಕ.ದಲ್ಲಿ 5,234 ಮತ್ತು ಉಡುಪಿ ಜಿಲ್ಲೆಯಲ್ಲಿ 7,716 ಕರುಗಳಿಗೆ ಲಸಿಕೆ ಹಾಕಲಾಗಿದೆ.ಇನ್ನು ಉಳಿದಿರುವ ಹಸುಗಳಿಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…