Advertisement
MIRROR FOCUS

#ViralVideo | ರಸ್ತೆ ಬದಿಯ ಹಸುಗಳು-ಎತ್ತುಗಳ ಬಗ್ಗೆ ಇರಲಿ ಎಚ್ಚರ | ಚೆನ್ನೈಯಲ್ಲಿ ಶಾಲಾ ಬಾಲಕಿಯ ಮೇಲೆ ಭಯಾನಕ ರೀತಿಯಲ್ಲಿ ದಾಳಿ ನಡೆಸಿದ ಗೂಳಿ..! |

Share

ರಸ್ತೆ ಬದಿಯಲ್ಲಿ ಅಡ್ಡಾಡುವ ಹಸು, ಎತ್ತುಗಳ ಬಗ್ಗೆ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ  ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದೀಗ ಆಡಳಿತವು ಎಚ್ಚೆತ್ತುಕೊಂಡಿದೆ.ಈ ಘಟನೆಯು ಎಲ್ಲಾ ಕಡೆಗೂ ಎಚ್ಚರಿಕೆ ಆಗಬೇಕಿದೆ.

Advertisement
Advertisement
Advertisement
Advertisement

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೇಲೆ ಗೂಳಿಯೊಂದು ದಾಳಿ ನಡೆಸಿ  ಗಾಯಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಚೆನ್ನೈನ ಎಂಎಂಡಿಎ ಕಾಲೋನಿ ಬಳಿಯ ಎಲಂಗೋ ನಗರದಲ್ಲಿ ಬುಧವಾರ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಂಧಿನಗರದ ನಿವಾಸಿ ಆಯೇಷಾ ತನ್ನ ತಾಯಿ ಮತ್ತು ತನ್ನ ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಗೂಳಿಯು ದಾಳಿ ಮಾಡಿದೆ.

Advertisement

ಸಮೀಪದ ಮನೆಯೊಂದರಿಂದ ದೊರೆತ ಸಿಸಿಟಿವಿ ವಿಡಿಯೋದಲ್ಲಿ ಎರಡು ಹಸುಗಳು ಬಾಲಕಿ ಮುಂದೆ ನಡೆಯುತ್ತಿರುವುದು ಕಂಡು ಬಂದಿದೆ. ಇದ್ದಕ್ಕಿದ್ದಂತೆ, ಒಂದು ಹಸುವು ಹುಡುಗಿಯ ಕಡೆಗೆ ತಿರುಗಿ ಅವಳ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೊಂಬುಗಳಿಂದ ತಿವಿದು ಬಾಲಕಿಯನ್ನು ಎತ್ತಿ ಎಸೆದಿದೆ. ಈ ಸಂದರ್ಭ ಸ್ಥಳೀಯರು ಗೂಳಿಯನ್ನು  ಹೆದರಿಸಲು ಪ್ರಯತ್ನಿಸುತ್ತಿರುವುದು ಹಾಗೂ ಬಾಲಕಿಯ ತಾಯಿ ಸಹಾಯಕ್ಕಾಗಿ ಕುರುಚಾಡುತ್ತಿರುವುದು  ವಿಡಿಯೋದಲ್ಲಿ ಕಂಡುಬಂದಿದೆ. ಸತತ ಪ್ರಯತ್ನಗಳ ನಂತರ, ಗೂಳಿಯನ್ನು ಸ್ಥಳದಿಂದ ಸ್ಥಳೀಯರು ಓಡಿಸಿದ್ದಾರೆ. ಬಾಲಕಿ ಗಾಯಗೊಂಡಿದ್ದಳು.

Advertisement

ಈ ವಿಡಿಯೋ ವೈರಲ್‌ ಆಗಿರುವುದು  ಗಮನಿಸಿದ ಚೆನ್ನೈ ಕಾರ್ಪೊರೇಷನ್ ಕಮಿಷನರ್ ಜೆ ರಾಧಾಕೃಷ್ಣನ್, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

15 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

15 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

15 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

15 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

15 hours ago