Advertisement
MIRROR FOCUS

#ViralVideo | ರಸ್ತೆ ಬದಿಯ ಹಸುಗಳು-ಎತ್ತುಗಳ ಬಗ್ಗೆ ಇರಲಿ ಎಚ್ಚರ | ಚೆನ್ನೈಯಲ್ಲಿ ಶಾಲಾ ಬಾಲಕಿಯ ಮೇಲೆ ಭಯಾನಕ ರೀತಿಯಲ್ಲಿ ದಾಳಿ ನಡೆಸಿದ ಗೂಳಿ..! |

Share

ರಸ್ತೆ ಬದಿಯಲ್ಲಿ ಅಡ್ಡಾಡುವ ಹಸು, ಎತ್ತುಗಳ ಬಗ್ಗೆ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ  ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದೀಗ ಆಡಳಿತವು ಎಚ್ಚೆತ್ತುಕೊಂಡಿದೆ.ಈ ಘಟನೆಯು ಎಲ್ಲಾ ಕಡೆಗೂ ಎಚ್ಚರಿಕೆ ಆಗಬೇಕಿದೆ.

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೇಲೆ ಗೂಳಿಯೊಂದು ದಾಳಿ ನಡೆಸಿ  ಗಾಯಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಚೆನ್ನೈನ ಎಂಎಂಡಿಎ ಕಾಲೋನಿ ಬಳಿಯ ಎಲಂಗೋ ನಗರದಲ್ಲಿ ಬುಧವಾರ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಂಧಿನಗರದ ನಿವಾಸಿ ಆಯೇಷಾ ತನ್ನ ತಾಯಿ ಮತ್ತು ತನ್ನ ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಗೂಳಿಯು ದಾಳಿ ಮಾಡಿದೆ.

ಸಮೀಪದ ಮನೆಯೊಂದರಿಂದ ದೊರೆತ ಸಿಸಿಟಿವಿ ವಿಡಿಯೋದಲ್ಲಿ ಎರಡು ಹಸುಗಳು ಬಾಲಕಿ ಮುಂದೆ ನಡೆಯುತ್ತಿರುವುದು ಕಂಡು ಬಂದಿದೆ. ಇದ್ದಕ್ಕಿದ್ದಂತೆ, ಒಂದು ಹಸುವು ಹುಡುಗಿಯ ಕಡೆಗೆ ತಿರುಗಿ ಅವಳ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೊಂಬುಗಳಿಂದ ತಿವಿದು ಬಾಲಕಿಯನ್ನು ಎತ್ತಿ ಎಸೆದಿದೆ. ಈ ಸಂದರ್ಭ ಸ್ಥಳೀಯರು ಗೂಳಿಯನ್ನು  ಹೆದರಿಸಲು ಪ್ರಯತ್ನಿಸುತ್ತಿರುವುದು ಹಾಗೂ ಬಾಲಕಿಯ ತಾಯಿ ಸಹಾಯಕ್ಕಾಗಿ ಕುರುಚಾಡುತ್ತಿರುವುದು  ವಿಡಿಯೋದಲ್ಲಿ ಕಂಡುಬಂದಿದೆ. ಸತತ ಪ್ರಯತ್ನಗಳ ನಂತರ, ಗೂಳಿಯನ್ನು ಸ್ಥಳದಿಂದ ಸ್ಥಳೀಯರು ಓಡಿಸಿದ್ದಾರೆ. ಬಾಲಕಿ ಗಾಯಗೊಂಡಿದ್ದಳು.

ಈ ವಿಡಿಯೋ ವೈರಲ್‌ ಆಗಿರುವುದು  ಗಮನಿಸಿದ ಚೆನ್ನೈ ಕಾರ್ಪೊರೇಷನ್ ಕಮಿಷನರ್ ಜೆ ರಾಧಾಕೃಷ್ಣನ್, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

9 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

10 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

23 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

23 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

24 hours ago