Advertisement
MIRROR FOCUS

#ViralVideo | ರಸ್ತೆ ಬದಿಯ ಹಸುಗಳು-ಎತ್ತುಗಳ ಬಗ್ಗೆ ಇರಲಿ ಎಚ್ಚರ | ಚೆನ್ನೈಯಲ್ಲಿ ಶಾಲಾ ಬಾಲಕಿಯ ಮೇಲೆ ಭಯಾನಕ ರೀತಿಯಲ್ಲಿ ದಾಳಿ ನಡೆಸಿದ ಗೂಳಿ..! |

Share

ರಸ್ತೆ ಬದಿಯಲ್ಲಿ ಅಡ್ಡಾಡುವ ಹಸು, ಎತ್ತುಗಳ ಬಗ್ಗೆ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ  ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದೀಗ ಆಡಳಿತವು ಎಚ್ಚೆತ್ತುಕೊಂಡಿದೆ.ಈ ಘಟನೆಯು ಎಲ್ಲಾ ಕಡೆಗೂ ಎಚ್ಚರಿಕೆ ಆಗಬೇಕಿದೆ.

Advertisement
Advertisement
Advertisement
Advertisement
Advertisement

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೇಲೆ ಗೂಳಿಯೊಂದು ದಾಳಿ ನಡೆಸಿ  ಗಾಯಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಚೆನ್ನೈನ ಎಂಎಂಡಿಎ ಕಾಲೋನಿ ಬಳಿಯ ಎಲಂಗೋ ನಗರದಲ್ಲಿ ಬುಧವಾರ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಂಧಿನಗರದ ನಿವಾಸಿ ಆಯೇಷಾ ತನ್ನ ತಾಯಿ ಮತ್ತು ತನ್ನ ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಗೂಳಿಯು ದಾಳಿ ಮಾಡಿದೆ.

Advertisement

ಸಮೀಪದ ಮನೆಯೊಂದರಿಂದ ದೊರೆತ ಸಿಸಿಟಿವಿ ವಿಡಿಯೋದಲ್ಲಿ ಎರಡು ಹಸುಗಳು ಬಾಲಕಿ ಮುಂದೆ ನಡೆಯುತ್ತಿರುವುದು ಕಂಡು ಬಂದಿದೆ. ಇದ್ದಕ್ಕಿದ್ದಂತೆ, ಒಂದು ಹಸುವು ಹುಡುಗಿಯ ಕಡೆಗೆ ತಿರುಗಿ ಅವಳ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೊಂಬುಗಳಿಂದ ತಿವಿದು ಬಾಲಕಿಯನ್ನು ಎತ್ತಿ ಎಸೆದಿದೆ. ಈ ಸಂದರ್ಭ ಸ್ಥಳೀಯರು ಗೂಳಿಯನ್ನು  ಹೆದರಿಸಲು ಪ್ರಯತ್ನಿಸುತ್ತಿರುವುದು ಹಾಗೂ ಬಾಲಕಿಯ ತಾಯಿ ಸಹಾಯಕ್ಕಾಗಿ ಕುರುಚಾಡುತ್ತಿರುವುದು  ವಿಡಿಯೋದಲ್ಲಿ ಕಂಡುಬಂದಿದೆ. ಸತತ ಪ್ರಯತ್ನಗಳ ನಂತರ, ಗೂಳಿಯನ್ನು ಸ್ಥಳದಿಂದ ಸ್ಥಳೀಯರು ಓಡಿಸಿದ್ದಾರೆ. ಬಾಲಕಿ ಗಾಯಗೊಂಡಿದ್ದಳು.

Advertisement

ಈ ವಿಡಿಯೋ ವೈರಲ್‌ ಆಗಿರುವುದು  ಗಮನಿಸಿದ ಚೆನ್ನೈ ಕಾರ್ಪೊರೇಷನ್ ಕಮಿಷನರ್ ಜೆ ರಾಧಾಕೃಷ್ಣನ್, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 days ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago