MIRROR FOCUS

#ViralVideo | ರಸ್ತೆ ಬದಿಯ ಹಸುಗಳು-ಎತ್ತುಗಳ ಬಗ್ಗೆ ಇರಲಿ ಎಚ್ಚರ | ಚೆನ್ನೈಯಲ್ಲಿ ಶಾಲಾ ಬಾಲಕಿಯ ಮೇಲೆ ಭಯಾನಕ ರೀತಿಯಲ್ಲಿ ದಾಳಿ ನಡೆಸಿದ ಗೂಳಿ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಸ್ತೆ ಬದಿಯಲ್ಲಿ ಅಡ್ಡಾಡುವ ಹಸು, ಎತ್ತುಗಳ ಬಗ್ಗೆ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ  ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದೀಗ ಆಡಳಿತವು ಎಚ್ಚೆತ್ತುಕೊಂಡಿದೆ.ಈ ಘಟನೆಯು ಎಲ್ಲಾ ಕಡೆಗೂ ಎಚ್ಚರಿಕೆ ಆಗಬೇಕಿದೆ.

Advertisement
Advertisement

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೇಲೆ ಗೂಳಿಯೊಂದು ದಾಳಿ ನಡೆಸಿ  ಗಾಯಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಚೆನ್ನೈನ ಎಂಎಂಡಿಎ ಕಾಲೋನಿ ಬಳಿಯ ಎಲಂಗೋ ನಗರದಲ್ಲಿ ಬುಧವಾರ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಂಧಿನಗರದ ನಿವಾಸಿ ಆಯೇಷಾ ತನ್ನ ತಾಯಿ ಮತ್ತು ತನ್ನ ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಗೂಳಿಯು ದಾಳಿ ಮಾಡಿದೆ.

ಸಮೀಪದ ಮನೆಯೊಂದರಿಂದ ದೊರೆತ ಸಿಸಿಟಿವಿ ವಿಡಿಯೋದಲ್ಲಿ ಎರಡು ಹಸುಗಳು ಬಾಲಕಿ ಮುಂದೆ ನಡೆಯುತ್ತಿರುವುದು ಕಂಡು ಬಂದಿದೆ. ಇದ್ದಕ್ಕಿದ್ದಂತೆ, ಒಂದು ಹಸುವು ಹುಡುಗಿಯ ಕಡೆಗೆ ತಿರುಗಿ ಅವಳ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೊಂಬುಗಳಿಂದ ತಿವಿದು ಬಾಲಕಿಯನ್ನು ಎತ್ತಿ ಎಸೆದಿದೆ. ಈ ಸಂದರ್ಭ ಸ್ಥಳೀಯರು ಗೂಳಿಯನ್ನು  ಹೆದರಿಸಲು ಪ್ರಯತ್ನಿಸುತ್ತಿರುವುದು ಹಾಗೂ ಬಾಲಕಿಯ ತಾಯಿ ಸಹಾಯಕ್ಕಾಗಿ ಕುರುಚಾಡುತ್ತಿರುವುದು  ವಿಡಿಯೋದಲ್ಲಿ ಕಂಡುಬಂದಿದೆ. ಸತತ ಪ್ರಯತ್ನಗಳ ನಂತರ, ಗೂಳಿಯನ್ನು ಸ್ಥಳದಿಂದ ಸ್ಥಳೀಯರು ಓಡಿಸಿದ್ದಾರೆ. ಬಾಲಕಿ ಗಾಯಗೊಂಡಿದ್ದಳು.

ಈ ವಿಡಿಯೋ ವೈರಲ್‌ ಆಗಿರುವುದು  ಗಮನಿಸಿದ ಚೆನ್ನೈ ಕಾರ್ಪೊರೇಷನ್ ಕಮಿಷನರ್ ಜೆ ರಾಧಾಕೃಷ್ಣನ್, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

30 minutes ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

15 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

2 days ago