Advertisement
MIRROR FOCUS

#ViralVideo | ರಸ್ತೆ ಬದಿಯ ಹಸುಗಳು-ಎತ್ತುಗಳ ಬಗ್ಗೆ ಇರಲಿ ಎಚ್ಚರ | ಚೆನ್ನೈಯಲ್ಲಿ ಶಾಲಾ ಬಾಲಕಿಯ ಮೇಲೆ ಭಯಾನಕ ರೀತಿಯಲ್ಲಿ ದಾಳಿ ನಡೆಸಿದ ಗೂಳಿ..! |

Share

ರಸ್ತೆ ಬದಿಯಲ್ಲಿ ಅಡ್ಡಾಡುವ ಹಸು, ಎತ್ತುಗಳ ಬಗ್ಗೆ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ಚೆನ್ನೈನಲ್ಲಿ ಶಾಲಾ ಬಾಲಕಿಯ ಮೇಲೆ ರಸ್ತೆ ಬದಿಯಲ್ಲಿ  ಅಡ್ಡಾಡುತ್ತಿದ್ದ ಗೂಳಿಯೊಂದು ಭಯಾನಕ ರೀತಿಯಲ್ಲಿ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಇದೀಗ ಆಡಳಿತವು ಎಚ್ಚೆತ್ತುಕೊಂಡಿದೆ.ಈ ಘಟನೆಯು ಎಲ್ಲಾ ಕಡೆಗೂ ಎಚ್ಚರಿಕೆ ಆಗಬೇಕಿದೆ.

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೇಲೆ ಗೂಳಿಯೊಂದು ದಾಳಿ ನಡೆಸಿ  ಗಾಯಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಚೆನ್ನೈನ ಎಂಎಂಡಿಎ ಕಾಲೋನಿ ಬಳಿಯ ಎಲಂಗೋ ನಗರದಲ್ಲಿ ಬುಧವಾರ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಂಧಿನಗರದ ನಿವಾಸಿ ಆಯೇಷಾ ತನ್ನ ತಾಯಿ ಮತ್ತು ತನ್ನ ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಗೂಳಿಯು ದಾಳಿ ಮಾಡಿದೆ.

ಸಮೀಪದ ಮನೆಯೊಂದರಿಂದ ದೊರೆತ ಸಿಸಿಟಿವಿ ವಿಡಿಯೋದಲ್ಲಿ ಎರಡು ಹಸುಗಳು ಬಾಲಕಿ ಮುಂದೆ ನಡೆಯುತ್ತಿರುವುದು ಕಂಡು ಬಂದಿದೆ. ಇದ್ದಕ್ಕಿದ್ದಂತೆ, ಒಂದು ಹಸುವು ಹುಡುಗಿಯ ಕಡೆಗೆ ತಿರುಗಿ ಅವಳ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೊಂಬುಗಳಿಂದ ತಿವಿದು ಬಾಲಕಿಯನ್ನು ಎತ್ತಿ ಎಸೆದಿದೆ. ಈ ಸಂದರ್ಭ ಸ್ಥಳೀಯರು ಗೂಳಿಯನ್ನು  ಹೆದರಿಸಲು ಪ್ರಯತ್ನಿಸುತ್ತಿರುವುದು ಹಾಗೂ ಬಾಲಕಿಯ ತಾಯಿ ಸಹಾಯಕ್ಕಾಗಿ ಕುರುಚಾಡುತ್ತಿರುವುದು  ವಿಡಿಯೋದಲ್ಲಿ ಕಂಡುಬಂದಿದೆ. ಸತತ ಪ್ರಯತ್ನಗಳ ನಂತರ, ಗೂಳಿಯನ್ನು ಸ್ಥಳದಿಂದ ಸ್ಥಳೀಯರು ಓಡಿಸಿದ್ದಾರೆ. ಬಾಲಕಿ ಗಾಯಗೊಂಡಿದ್ದಳು.

ಈ ವಿಡಿಯೋ ವೈರಲ್‌ ಆಗಿರುವುದು  ಗಮನಿಸಿದ ಚೆನ್ನೈ ಕಾರ್ಪೊರೇಷನ್ ಕಮಿಷನರ್ ಜೆ ರಾಧಾಕೃಷ್ಣನ್, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

21 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago