ಮದ್ಯ ಪ್ರಿಯರಿಗೆ ಹಿಮಾಚಲ ಪ್ರದೇಶದಲ್ಲಿ ಹೆಚ್ಚು”ವರಿ”….| ಪ್ರತಿ ಬಾಟಲ್ ಮೇಲೆ 10 ರೂ. ಗೋ ತೆರಿಗೆ |ನಮ್ಮ ರಾಜ್ಯದಲ್ಲೂ ಮಾಡಿದರೆ ಒಳ್ಳೆಯದಿತ್ತು….!

March 19, 2023
1:48 PM

ಇದಪ್ಪ ವರಸೇ ಅಂದ್ರೆ. ಕುಡಿಯೊದೇನೋ ಕುಡಿತಿರಿ.. ಹಾಗೆ ನಿಮ್ಮ ಹೆಂಡತಿ ಮಕ್ಕಳಿಗೆ ಒಂದರ್ಧ ಲೀಟರ್ ಹಾಲು ಆದ್ರೂ ತಗೊಂಡೋಗ್ರೋ ಅಂದ್ರೆ ಈ ಕುಡುಕರು ನಾವು ಕುಡಿದ್ರೆ ಸಾಕು, ಹೆಂಡತಿ ಮಕ್ಳು ಹಾಳಾಗೊಗ್ಲಿ ಅಂತಿದ್ರು. ಆದ್ರೆ ಇವಾಗ ಹಿಮಾಚಲದ ಪ್ರದೇಶದ ಸರ್ಕಾರ ಅಂಥವರಿಗೆ ಸರಿಯಾಗೆ ಬುದ್ಧಿ ಕಲಿಸಿದೆ.

ಮದ್ಯಪಾನ ಪ್ರಿಯರಿಗೆ ಶಾಕ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ ಪ್ರತಿ ಬಾಟಲ್ ಮದ್ಯದ ಮೇಲೆ 10 ರೂ. ‘ಗೋ ತೆರಿಗೆವಿಧಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸುರೇಶ್ ಕುಮಾರ್ ಸುಖು ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದರು. ಇದರಲ್ಲಿಗೋ ತೆರಿಗೆವಿಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ರಾಜ್ಯದ ಆರ್ಥಿಕ ಚಟುವಟಿಕೆಯಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಹಸು ಸಾಕಾಣಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದರಿಂದ ವಾರ್ಷಿಕ ನೂರು ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿಯನ್ನು ಹಿಮಾಚಲ ಪ್ರದೇಶ ಸರ್ಕಾರ ಹೊಂದಿದೆ ಎನ್ನಲಾಗಿದೆ.

ಬಜೆಟ್ ಭಾಷಣ ಮಾಡಿದ ಸುಖು, ಮೊದಲು ಹಲವು ರಾಜ್ಯಗಳಲ್ಲಿ ಗೋ ಸಂಬಂಧಿ ತೆರಿಗೆ ಸಂಗ್ರಹಿಸಲಾಗುತ್ತದೆ. ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಚಂಡೀಗಢಗಳಲ್ಲಿ ಗೋ ತೆರಿಗೆ ಸಂಗ್ರಹಿಸಲಾಗುತ್ತಿದೆ. ರಾಜ್ಯಗಳಲ್ಲಿ ಮದ್ಯದ ಹೊರತಾಗಿ ಬೇರೆ ವಸ್ತುಗಳ ಮೇಲೆ ತೆರಿಗೆ ವಿಧಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ಮದ್ಯದ ಮೇಲೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ರೀತಿ ನಮ್ಮ ರಾಜ್ಯದಲ್ಲೂ ಮಾಡಿದ್ರೆ ಒಳ್ಳೆಯದಿತ್ತು. ಹೇಗೂ ರಾಜ್ಯದ ಬೊಕ್ಕಸಕ್ಕೆ ತಮ್ಮಿಂದಾದ ಸಹಾಯ ಮಾಡ್ತಿದ್ದಾರೆ. ಹಾಗೆ ಗೋ ರಕ್ಷಣೆಗೂ ಮದ್ಯ ಪ್ರಿಯರು ಸಹಕರಿಸಿದರೆ ಗೋ ಸಂತತಿ ಉಳಿಯಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror