Advertisement
ಸುದ್ದಿಗಳು

ಮದ್ಯ ಪ್ರಿಯರಿಗೆ ಹಿಮಾಚಲ ಪ್ರದೇಶದಲ್ಲಿ ಹೆಚ್ಚು”ವರಿ”….| ಪ್ರತಿ ಬಾಟಲ್ ಮೇಲೆ 10 ರೂ. ಗೋ ತೆರಿಗೆ |ನಮ್ಮ ರಾಜ್ಯದಲ್ಲೂ ಮಾಡಿದರೆ ಒಳ್ಳೆಯದಿತ್ತು….!

Share

ಇದಪ್ಪ ವರಸೇ ಅಂದ್ರೆ. ಕುಡಿಯೊದೇನೋ ಕುಡಿತಿರಿ.. ಹಾಗೆ ನಿಮ್ಮ ಹೆಂಡತಿ ಮಕ್ಕಳಿಗೆ ಒಂದರ್ಧ ಲೀಟರ್ ಹಾಲು ಆದ್ರೂ ತಗೊಂಡೋಗ್ರೋ ಅಂದ್ರೆ ಈ ಕುಡುಕರು ನಾವು ಕುಡಿದ್ರೆ ಸಾಕು, ಹೆಂಡತಿ ಮಕ್ಳು ಹಾಳಾಗೊಗ್ಲಿ ಅಂತಿದ್ರು. ಆದ್ರೆ ಇವಾಗ ಹಿಮಾಚಲದ ಪ್ರದೇಶದ ಸರ್ಕಾರ ಅಂಥವರಿಗೆ ಸರಿಯಾಗೆ ಬುದ್ಧಿ ಕಲಿಸಿದೆ.

ಮದ್ಯಪಾನ ಪ್ರಿಯರಿಗೆ ಶಾಕ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ ಪ್ರತಿ ಬಾಟಲ್ ಮದ್ಯದ ಮೇಲೆ 10 ರೂ. ‘ಗೋ ತೆರಿಗೆವಿಧಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸುರೇಶ್ ಕುಮಾರ್ ಸುಖು ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದರು. ಇದರಲ್ಲಿಗೋ ತೆರಿಗೆವಿಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ರಾಜ್ಯದ ಆರ್ಥಿಕ ಚಟುವಟಿಕೆಯಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಹಸು ಸಾಕಾಣಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದರಿಂದ ವಾರ್ಷಿಕ ನೂರು ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿಯನ್ನು ಹಿಮಾಚಲ ಪ್ರದೇಶ ಸರ್ಕಾರ ಹೊಂದಿದೆ ಎನ್ನಲಾಗಿದೆ.

ಬಜೆಟ್ ಭಾಷಣ ಮಾಡಿದ ಸುಖು, ಮೊದಲು ಹಲವು ರಾಜ್ಯಗಳಲ್ಲಿ ಗೋ ಸಂಬಂಧಿ ತೆರಿಗೆ ಸಂಗ್ರಹಿಸಲಾಗುತ್ತದೆ. ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಚಂಡೀಗಢಗಳಲ್ಲಿ ಗೋ ತೆರಿಗೆ ಸಂಗ್ರಹಿಸಲಾಗುತ್ತಿದೆ. ರಾಜ್ಯಗಳಲ್ಲಿ ಮದ್ಯದ ಹೊರತಾಗಿ ಬೇರೆ ವಸ್ತುಗಳ ಮೇಲೆ ತೆರಿಗೆ ವಿಧಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ಮದ್ಯದ ಮೇಲೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ರೀತಿ ನಮ್ಮ ರಾಜ್ಯದಲ್ಲೂ ಮಾಡಿದ್ರೆ ಒಳ್ಳೆಯದಿತ್ತು. ಹೇಗೂ ರಾಜ್ಯದ ಬೊಕ್ಕಸಕ್ಕೆ ತಮ್ಮಿಂದಾದ ಸಹಾಯ ಮಾಡ್ತಿದ್ದಾರೆ. ಹಾಗೆ ಗೋ ರಕ್ಷಣೆಗೂ ಮದ್ಯ ಪ್ರಿಯರು ಸಹಕರಿಸಿದರೆ ಗೋ ಸಂತತಿ ಉಳಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

38 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

1 hour ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago