Advertisement
ಸುದ್ದಿಗಳು

ಮದ್ಯ ಪ್ರಿಯರಿಗೆ ಹಿಮಾಚಲ ಪ್ರದೇಶದಲ್ಲಿ ಹೆಚ್ಚು”ವರಿ”….| ಪ್ರತಿ ಬಾಟಲ್ ಮೇಲೆ 10 ರೂ. ಗೋ ತೆರಿಗೆ |ನಮ್ಮ ರಾಜ್ಯದಲ್ಲೂ ಮಾಡಿದರೆ ಒಳ್ಳೆಯದಿತ್ತು….!

Share

ಇದಪ್ಪ ವರಸೇ ಅಂದ್ರೆ. ಕುಡಿಯೊದೇನೋ ಕುಡಿತಿರಿ.. ಹಾಗೆ ನಿಮ್ಮ ಹೆಂಡತಿ ಮಕ್ಕಳಿಗೆ ಒಂದರ್ಧ ಲೀಟರ್ ಹಾಲು ಆದ್ರೂ ತಗೊಂಡೋಗ್ರೋ ಅಂದ್ರೆ ಈ ಕುಡುಕರು ನಾವು ಕುಡಿದ್ರೆ ಸಾಕು, ಹೆಂಡತಿ ಮಕ್ಳು ಹಾಳಾಗೊಗ್ಲಿ ಅಂತಿದ್ರು. ಆದ್ರೆ ಇವಾಗ ಹಿಮಾಚಲದ ಪ್ರದೇಶದ ಸರ್ಕಾರ ಅಂಥವರಿಗೆ ಸರಿಯಾಗೆ ಬುದ್ಧಿ ಕಲಿಸಿದೆ.

ಮದ್ಯಪಾನ ಪ್ರಿಯರಿಗೆ ಶಾಕ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ ಪ್ರತಿ ಬಾಟಲ್ ಮದ್ಯದ ಮೇಲೆ 10 ರೂ. ‘ಗೋ ತೆರಿಗೆವಿಧಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸುರೇಶ್ ಕುಮಾರ್ ಸುಖು ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದರು. ಇದರಲ್ಲಿಗೋ ತೆರಿಗೆವಿಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.

Advertisement

ರಾಜ್ಯದ ಆರ್ಥಿಕ ಚಟುವಟಿಕೆಯಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಹಸು ಸಾಕಾಣಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದರಿಂದ ವಾರ್ಷಿಕ ನೂರು ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿಯನ್ನು ಹಿಮಾಚಲ ಪ್ರದೇಶ ಸರ್ಕಾರ ಹೊಂದಿದೆ ಎನ್ನಲಾಗಿದೆ.

Advertisement

ಬಜೆಟ್ ಭಾಷಣ ಮಾಡಿದ ಸುಖು, ಮೊದಲು ಹಲವು ರಾಜ್ಯಗಳಲ್ಲಿ ಗೋ ಸಂಬಂಧಿ ತೆರಿಗೆ ಸಂಗ್ರಹಿಸಲಾಗುತ್ತದೆ. ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಚಂಡೀಗಢಗಳಲ್ಲಿ ಗೋ ತೆರಿಗೆ ಸಂಗ್ರಹಿಸಲಾಗುತ್ತಿದೆ. ರಾಜ್ಯಗಳಲ್ಲಿ ಮದ್ಯದ ಹೊರತಾಗಿ ಬೇರೆ ವಸ್ತುಗಳ ಮೇಲೆ ತೆರಿಗೆ ವಿಧಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ಮದ್ಯದ ಮೇಲೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ರೀತಿ ನಮ್ಮ ರಾಜ್ಯದಲ್ಲೂ ಮಾಡಿದ್ರೆ ಒಳ್ಳೆಯದಿತ್ತು. ಹೇಗೂ ರಾಜ್ಯದ ಬೊಕ್ಕಸಕ್ಕೆ ತಮ್ಮಿಂದಾದ ಸಹಾಯ ಮಾಡ್ತಿದ್ದಾರೆ. ಹಾಗೆ ಗೋ ರಕ್ಷಣೆಗೂ ಮದ್ಯ ಪ್ರಿಯರು ಸಹಕರಿಸಿದರೆ ಗೋ ಸಂತತಿ ಉಳಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

11 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

20 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago