ಪರಿಸರ ಸ್ನೇಹಕ್ಕೆ ಒಂದು ಹೆಜ್ಜೆ | ಗೋಮಯದಿಂದ ತಯಾರಾದ ಕಾಗದ | ಮೊದಲ ಬಾರಿಗೆ ತಯಾರಾದ ಕಾಗದ ರಾಮಚಂದ್ರಾಪುರ ಮಠದಲ್ಲಿ ಲೋಕಾರ್ಪಣೆ‌ |

July 25, 2022
8:11 PM
Advertisement

ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ   ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ  ನೆರವೇರಿಸಿದರು.

Advertisement
Advertisement
Advertisement

ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ ಅಂಶ ಎನಿಸಲಿದೆ. ಶ್ರೀಮಠದ ಭಕ್ತರು ಮತ್ತು ಸಾರ್ವಜನಿಕರು ಇಂಥ ಪ್ರಯೋಗಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶ್ರೀಗಳು ಆಶಿಸಿದರು.ಗೋಮಯ ಕಾಗದದಲ್ಲಿ ಮುದ್ರಿಸಿದ ವಿವಾಹ ಆಮಂತ್ರಣವನ್ನೂ ಸ್ವಾಮೀಜಿ ಬಿಡುಗಡೆ ಮಾಡಿ ಇದು ಅನುಕರಣೀಯ ಎಂದರು.

Advertisement

ಸಂಪೂರ್ಣ ಪರಿಸರ ಸ್ನೇಹಿ, ರಾಸಾಯನಿಕ ರಹಿತ, ನೈಸರ್ಗಿಕವಾದ ಈ ವಿಶಿಷ್ಟ ಕಾಗದವನ್ನು ಶುದ್ಧ ದೇಸಿ ಗೋವಿನ ಸೆಗಣಿಯಿಂದ ತಯಾರಿಸಲಾಗಿದ್ದು, ಇದೇ ಮೊದಲ ಬಾರಿಗೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಈ ಯೋಜನೆ ಬಗ್ಗೆ ವಿವರ ನೀಡಿದ ಕಾಮದುಘಾ ವಿಭಾಗದ ಡಾ.ವೈ.ವಿ.ಕೃಷ್ಣಮೂರ್ತಿ ವಿವರಿಸಿದರು. ಸಾಮಾನ್ಯ ಕಾಗದ ಉತ್ಪಾದನೆಗೆ ಮರ ಹಾಗೂ ನೀರು ವ್ಯಾಪಕವಾಗಿ ಬಳಕೆಯಾಗುವುದರಿಂದ ಪರಿಸರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಿಸುತ್ತಿದೆ. ವಿದೇಶಗಳಲ್ಲಿ ಇಂದು ಇಂಥ ಪರಿಸರ ಸ್ನೇಹಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದ್ದು, ನಾವೂ ಇದರ ಮಹತ್ವ ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

Advertisement
ಸಂಶೋಧನಾ ಖಂಡದ ಡಾ.ರವಿ ಪಾಂಡವಪುರ, ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ, ಮಾಧ್ಯಮ ವಿಭಾಗದ ಉದಯಶಂಕರ ಮಿತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror