ರಾಜ್ಯ

ಪರಿಸರ ಸ್ನೇಹಕ್ಕೆ ಒಂದು ಹೆಜ್ಜೆ | ಗೋಮಯದಿಂದ ತಯಾರಾದ ಕಾಗದ | ಮೊದಲ ಬಾರಿಗೆ ತಯಾರಾದ ಕಾಗದ ರಾಮಚಂದ್ರಾಪುರ ಮಠದಲ್ಲಿ ಲೋಕಾರ್ಪಣೆ‌ |

Share

ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ   ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ  ನೆರವೇರಿಸಿದರು.

Advertisement
Advertisement

ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ ಅಂಶ ಎನಿಸಲಿದೆ. ಶ್ರೀಮಠದ ಭಕ್ತರು ಮತ್ತು ಸಾರ್ವಜನಿಕರು ಇಂಥ ಪ್ರಯೋಗಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶ್ರೀಗಳು ಆಶಿಸಿದರು.ಗೋಮಯ ಕಾಗದದಲ್ಲಿ ಮುದ್ರಿಸಿದ ವಿವಾಹ ಆಮಂತ್ರಣವನ್ನೂ ಸ್ವಾಮೀಜಿ ಬಿಡುಗಡೆ ಮಾಡಿ ಇದು ಅನುಕರಣೀಯ ಎಂದರು.

ಸಂಪೂರ್ಣ ಪರಿಸರ ಸ್ನೇಹಿ, ರಾಸಾಯನಿಕ ರಹಿತ, ನೈಸರ್ಗಿಕವಾದ ಈ ವಿಶಿಷ್ಟ ಕಾಗದವನ್ನು ಶುದ್ಧ ದೇಸಿ ಗೋವಿನ ಸೆಗಣಿಯಿಂದ ತಯಾರಿಸಲಾಗಿದ್ದು, ಇದೇ ಮೊದಲ ಬಾರಿಗೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಈ ಯೋಜನೆ ಬಗ್ಗೆ ವಿವರ ನೀಡಿದ ಕಾಮದುಘಾ ವಿಭಾಗದ ಡಾ.ವೈ.ವಿ.ಕೃಷ್ಣಮೂರ್ತಿ ವಿವರಿಸಿದರು. ಸಾಮಾನ್ಯ ಕಾಗದ ಉತ್ಪಾದನೆಗೆ ಮರ ಹಾಗೂ ನೀರು ವ್ಯಾಪಕವಾಗಿ ಬಳಕೆಯಾಗುವುದರಿಂದ ಪರಿಸರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಿಸುತ್ತಿದೆ. ವಿದೇಶಗಳಲ್ಲಿ ಇಂದು ಇಂಥ ಪರಿಸರ ಸ್ನೇಹಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದ್ದು, ನಾವೂ ಇದರ ಮಹತ್ವ ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಸಂಶೋಧನಾ ಖಂಡದ ಡಾ.ರವಿ ಪಾಂಡವಪುರ, ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ, ಮಾಧ್ಯಮ ವಿಭಾಗದ ಉದಯಶಂಕರ ಮಿತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

3 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

4 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

5 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

5 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

5 hours ago