Advertisement
ರಾಜ್ಯ

ಪರಿಸರ ಸ್ನೇಹಕ್ಕೆ ಒಂದು ಹೆಜ್ಜೆ | ಗೋಮಯದಿಂದ ತಯಾರಾದ ಕಾಗದ | ಮೊದಲ ಬಾರಿಗೆ ತಯಾರಾದ ಕಾಗದ ರಾಮಚಂದ್ರಾಪುರ ಮಠದಲ್ಲಿ ಲೋಕಾರ್ಪಣೆ‌ |

Share

ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ   ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ  ನೆರವೇರಿಸಿದರು.

Advertisement
Advertisement
Advertisement
Advertisement

ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ ಅಂಶ ಎನಿಸಲಿದೆ. ಶ್ರೀಮಠದ ಭಕ್ತರು ಮತ್ತು ಸಾರ್ವಜನಿಕರು ಇಂಥ ಪ್ರಯೋಗಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶ್ರೀಗಳು ಆಶಿಸಿದರು.ಗೋಮಯ ಕಾಗದದಲ್ಲಿ ಮುದ್ರಿಸಿದ ವಿವಾಹ ಆಮಂತ್ರಣವನ್ನೂ ಸ್ವಾಮೀಜಿ ಬಿಡುಗಡೆ ಮಾಡಿ ಇದು ಅನುಕರಣೀಯ ಎಂದರು.

Advertisement

ಸಂಪೂರ್ಣ ಪರಿಸರ ಸ್ನೇಹಿ, ರಾಸಾಯನಿಕ ರಹಿತ, ನೈಸರ್ಗಿಕವಾದ ಈ ವಿಶಿಷ್ಟ ಕಾಗದವನ್ನು ಶುದ್ಧ ದೇಸಿ ಗೋವಿನ ಸೆಗಣಿಯಿಂದ ತಯಾರಿಸಲಾಗಿದ್ದು, ಇದೇ ಮೊದಲ ಬಾರಿಗೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಈ ಯೋಜನೆ ಬಗ್ಗೆ ವಿವರ ನೀಡಿದ ಕಾಮದುಘಾ ವಿಭಾಗದ ಡಾ.ವೈ.ವಿ.ಕೃಷ್ಣಮೂರ್ತಿ ವಿವರಿಸಿದರು. ಸಾಮಾನ್ಯ ಕಾಗದ ಉತ್ಪಾದನೆಗೆ ಮರ ಹಾಗೂ ನೀರು ವ್ಯಾಪಕವಾಗಿ ಬಳಕೆಯಾಗುವುದರಿಂದ ಪರಿಸರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಿಸುತ್ತಿದೆ. ವಿದೇಶಗಳಲ್ಲಿ ಇಂದು ಇಂಥ ಪರಿಸರ ಸ್ನೇಹಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದ್ದು, ನಾವೂ ಇದರ ಮಹತ್ವ ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

Advertisement
ಸಂಶೋಧನಾ ಖಂಡದ ಡಾ.ರವಿ ಪಾಂಡವಪುರ, ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ, ಮಾಧ್ಯಮ ವಿಭಾಗದ ಉದಯಶಂಕರ ಮಿತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago