Advertisement
ರಾಜ್ಯ

ಪರಿಸರ ಸ್ನೇಹಕ್ಕೆ ಒಂದು ಹೆಜ್ಜೆ | ಗೋಮಯದಿಂದ ತಯಾರಾದ ಕಾಗದ | ಮೊದಲ ಬಾರಿಗೆ ತಯಾರಾದ ಕಾಗದ ರಾಮಚಂದ್ರಾಪುರ ಮಠದಲ್ಲಿ ಲೋಕಾರ್ಪಣೆ‌ |

Share

ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ   ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ  ನೆರವೇರಿಸಿದರು.

ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ ಅಂಶ ಎನಿಸಲಿದೆ. ಶ್ರೀಮಠದ ಭಕ್ತರು ಮತ್ತು ಸಾರ್ವಜನಿಕರು ಇಂಥ ಪ್ರಯೋಗಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶ್ರೀಗಳು ಆಶಿಸಿದರು.ಗೋಮಯ ಕಾಗದದಲ್ಲಿ ಮುದ್ರಿಸಿದ ವಿವಾಹ ಆಮಂತ್ರಣವನ್ನೂ ಸ್ವಾಮೀಜಿ ಬಿಡುಗಡೆ ಮಾಡಿ ಇದು ಅನುಕರಣೀಯ ಎಂದರು.

ಸಂಪೂರ್ಣ ಪರಿಸರ ಸ್ನೇಹಿ, ರಾಸಾಯನಿಕ ರಹಿತ, ನೈಸರ್ಗಿಕವಾದ ಈ ವಿಶಿಷ್ಟ ಕಾಗದವನ್ನು ಶುದ್ಧ ದೇಸಿ ಗೋವಿನ ಸೆಗಣಿಯಿಂದ ತಯಾರಿಸಲಾಗಿದ್ದು, ಇದೇ ಮೊದಲ ಬಾರಿಗೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಈ ಯೋಜನೆ ಬಗ್ಗೆ ವಿವರ ನೀಡಿದ ಕಾಮದುಘಾ ವಿಭಾಗದ ಡಾ.ವೈ.ವಿ.ಕೃಷ್ಣಮೂರ್ತಿ ವಿವರಿಸಿದರು. ಸಾಮಾನ್ಯ ಕಾಗದ ಉತ್ಪಾದನೆಗೆ ಮರ ಹಾಗೂ ನೀರು ವ್ಯಾಪಕವಾಗಿ ಬಳಕೆಯಾಗುವುದರಿಂದ ಪರಿಸರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಿಸುತ್ತಿದೆ. ವಿದೇಶಗಳಲ್ಲಿ ಇಂದು ಇಂಥ ಪರಿಸರ ಸ್ನೇಹಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದ್ದು, ನಾವೂ ಇದರ ಮಹತ್ವ ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಸಂಶೋಧನಾ ಖಂಡದ ಡಾ.ರವಿ ಪಾಂಡವಪುರ, ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ, ಮಾಧ್ಯಮ ವಿಭಾಗದ ಉದಯಶಂಕರ ಮಿತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

7 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

7 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

15 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

15 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago