ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನೆರವೇರಿಸಿದರು.
ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ ಅಂಶ ಎನಿಸಲಿದೆ. ಶ್ರೀಮಠದ ಭಕ್ತರು ಮತ್ತು ಸಾರ್ವಜನಿಕರು ಇಂಥ ಪ್ರಯೋಗಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶ್ರೀಗಳು ಆಶಿಸಿದರು.ಗೋಮಯ ಕಾಗದದಲ್ಲಿ ಮುದ್ರಿಸಿದ ವಿವಾಹ ಆಮಂತ್ರಣವನ್ನೂ ಸ್ವಾಮೀಜಿ ಬಿಡುಗಡೆ ಮಾಡಿ ಇದು ಅನುಕರಣೀಯ ಎಂದರು.
ಸಂಪೂರ್ಣ ಪರಿಸರ ಸ್ನೇಹಿ, ರಾಸಾಯನಿಕ ರಹಿತ, ನೈಸರ್ಗಿಕವಾದ ಈ ವಿಶಿಷ್ಟ ಕಾಗದವನ್ನು ಶುದ್ಧ ದೇಸಿ ಗೋವಿನ ಸೆಗಣಿಯಿಂದ ತಯಾರಿಸಲಾಗಿದ್ದು, ಇದೇ ಮೊದಲ ಬಾರಿಗೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಈ ಯೋಜನೆ ಬಗ್ಗೆ ವಿವರ ನೀಡಿದ ಕಾಮದುಘಾ ವಿಭಾಗದ ಡಾ.ವೈ.ವಿ.ಕೃಷ್ಣಮೂರ್ತಿ ವಿವರಿಸಿದರು. ಸಾಮಾನ್ಯ ಕಾಗದ ಉತ್ಪಾದನೆಗೆ ಮರ ಹಾಗೂ ನೀರು ವ್ಯಾಪಕವಾಗಿ ಬಳಕೆಯಾಗುವುದರಿಂದ ಪರಿಸರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಿಸುತ್ತಿದೆ. ವಿದೇಶಗಳಲ್ಲಿ ಇಂದು ಇಂಥ ಪರಿಸರ ಸ್ನೇಹಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದ್ದು, ನಾವೂ ಇದರ ಮಹತ್ವ ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದರು.
ಸಂಶೋಧನಾ ಖಂಡದ ಡಾ.ರವಿ ಪಾಂಡವಪುರ, ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ, ಮಾಧ್ಯಮ ವಿಭಾಗದ ಉದಯಶಂಕರ ಮಿತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…