Advertisement
MIRROR FOCUS

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

Share

ಬಕ್ರೀದ್‌ ಹಬ್ಬದ ಮುನ್ನ ದೇಶದಲ್ಲಿ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಕೆಲವು ಮುಸ್ಲಿಂ ಸಂಘಟನೆಗಳು ಗೋವನ್ನು ಭಾರತದ “ರಾಷ್ಟ್ರೀಯ ಪ್ರಾಣಿ” ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದರೆ, ಮತ್ತೊಂದೆಡೆ ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ನೀಡಲು ನಿರಾಕರಿಸಿದೆ.

ಅಖಿಲ ಭಾರತ ಹಿಂದೂ ಮಹಾಸಭಾ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರ್ವಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ದೇಶದಾದ್ಯಂತ ಗೋಹತ್ಯೆ ನಿಷೇಧ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹಾಗೂ ಬಕ್ರೀದ್‌ಗೂ ಮುನ್ನ ತುರ್ತು ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ, “ತುರ್ತು ಅಗತ್ಯ ಕಾಣುತ್ತಿಲ್ಲ” ಎಂದು ಹೇಳಿ ಅರ್ಜಿಯ ತುರ್ತು ವಿಚಾರಣೆಗೆ ಒಪ್ಪಲಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಬೆಳವಣಿಗೆಯ ನಡುವೆಯೇ ಕೆಲವು ದಿನಗಳಿಂದ ಜಮಿಯತ್ ಉಲಮಾ-ಎ-ಹಿಂದ್‌, ಆಲ್ ಇಂಡಿಯಾ ಮುಸ್ಲಿಂ ಜಮಾತ್‌, ಆಲ್ ಇಂಡಿಯಾ ಕುರೇಶಿ ಜಮಾತ್‌ ಸೇರಿದಂತೆ ಕೆಲವು ಮುಸ್ಲಿಂ ಸಂಘಟನೆಗಳು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಆಗ್ರಹಿಸಿವೆ. ದೇಶದಾದ್ಯಂತ ಒಂದೇ ರೀತಿಯ ಕಾನೂನು ಜಾರಿಯಾದರೆ “ಗೋ ರಕ್ಷಣೆ” ಹೆಸರಿನಲ್ಲಿ ನಡೆಯುವ ಗುಂಪು ಹಿಂಸಾಚಾರ, ಹಲ್ಲೆ, ಘರ್ಷಣೆ ಮತ್ತು ರಾಜಕೀಯ ದುರುಪಯೋಗ ಕಡಿಮೆಯಾಗಬಹುದು ಎಂಬುದು ಅವರ ವಾದವಾಗಿದೆ.

ಜಮಿಯತ್ ಉಲಮಾ-ಎ-ಹಿಂದ್‌ನ ಮೌಲಾನಾ ಅರ್ಷದ್ ಮದನಿ, “ಗೋವು ಭಾರತದ ಸಂಸ್ಕೃತಿ ಮತ್ತು ಭಾವನೆಯ ಭಾಗ. ಇದನ್ನು ರಾಜಕೀಯ ಮತ್ತು ಧಾರ್ಮಿಕ ದ್ವೇಷಕ್ಕೆ ಬಳಸಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಜಮಾತ್‌ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತು ಸಂಯುಕ್ತ ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಇದೇ ವೇಳೆ, ಕೆಲವು ರಾಜ್ಯಗಳಲ್ಲಿ ಬಕ್ರೀದ್‌ ಸಮಯದಲ್ಲಿ ಗೋಹತ್ಯೆ ಕುರಿತ ನಿಯಂತ್ರಣ ಕ್ರಮಗಳನ್ನು ಸರ್ಕಾರಗಳು ಈಗಾಗಲೇ ಜಾರಿಗೊಳಿಸಿವೆ. ಅಸ್ಸಾಂ ಮುಖ್ಯಮಂತ್ರಿ  ಹಿಮಂತ್‌ ಬಿಸ್ವಾಸ್‌ ಶರ್ಮ ಅವರು ಕೆಲವು ಮುಸ್ಲಿಂ ಸಂಘಟನೆಗಳು ಸ್ವಯಂಪ್ರೇರಿತವಾಗಿ ಗೋಹತ್ಯೆ ಮಾಡದಿರಲು ನೀಡಿದ ಕರೆ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಭಾರತದ ಈಗಿನ ರಾಷ್ಟ್ರೀಯ ಪ್ರಾಣಿ ಹುಲಿ ಆಗಿದೆ. ಗೋವನ್ನು ಕೂಡಾ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಇದೀಗ ಕೆಲವು ಮುಸ್ಲಿಂ ಸಂಘಟನೆಗಳೂ ಇದೇ ಬೇಡಿಕೆಗೆ ಬೆಂಬಲ ನೀಡುತ್ತಿರುವುದು ದೇಶದ ರಾಜಕೀಯ ಹಾಗೂ ಸಾಮಾಜಿಕ ವಲಯಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Ahead of Bakrid, cow protection has once again become a national debate in India. While the Supreme Court refused urgent hearing on a PIL seeking a complete ban on cow slaughter, several Muslim organisations have demanded that the cow be declared India’s national animal. They argue that a uniform law could reduce mob violence and political misuse in the name of cow protection.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

3 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

3 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago