Advertisement
ಸುದ್ದಿಗಳು

ಮಣ್ಣಿನ ಫಲವತ್ತತೆಗೆ ಗೋಮೂತ್ರ ಮತ್ತು ಸಗಣಿ ಸಹಕಾರಿ: ನೀತಿ ಆಯೋಗ ಶಿಫಾರಸ್ಸು : ಸಾವಯವ ಕೃಷಿಯ ಪ್ರಾಮುಖ್ಯತೆ ಎತ್ತಿ ಹಿಡಿದ ನೀತಿ ಆಯೋಗ

Share

ಇತ್ತೀಚೆಗೆ ರಾಸಾಯನಿಕ ಕೃಷಿ ಪದ್ಧತಿಗಿಂತ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೆಚ್ಚಿನ ರೈತರಿಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ. ಆದರೂ ನಮ್ಮ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಂಡಿದೆ. ಹೀಗೆ ಮುಂದುವರೆದರೆ ಮುಂದೊಂದು ದಿನ ಮಣ್ಣು ಮಣ್ಣಾಗಿ ಉಳಿದಿರಲ್ಲ. ಫಲವತ್ತತೆಯನ್ನು ಕಳೆದುಕೊಂಡು ನಿಸ್ತೇಜವಾಗಿ ಬಿಡುತ್ತದೆ. ಇದೀಗ ನೀತಿ ಆಯೋಗ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ನೀತಿ ಆಯೋಗವು ಸಾವಯವ ಹಾಗೂ ಜೈವಿಕ ರಸಗೊಬ್ಬರದ ಉತ್ಪಾದನೆ ಹಾಗೂ ಉತ್ತೇಜನದ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯ ಹೆಚ್ಚಳಕ್ಕೆ ಗೋಶಾಲೆಗಳ ಮೇಲೆ ಹೆಚ್ಚಿನ ಗಮನ’ ಎಂಬ ವರದಿಯನ್ನು ಬಿಡುಗಡೆ ಮಾಡಿದ್ದು “ಗೋಮೂತ್ರ ಹಾಗೂ ಸಗಣಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ” ಎಂದು ತಿಳಿಸಿದೆ. ಈ ಮೂಲಕ ಸಾವಯವ ಕೃಷಿಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸದಸ್ಯರನ್ನು ಒಳಗೊಂಡ 17 ಸದಸ್ಯರ ನೀತಿ ಆಯೋಗದ ಕಾರ್ಯಪಡೆಯು (NITI Aayog Task Force) ತನ್ನ ವರದಿಯಲ್ಲಿ ಭಾರತದ ಮಣ್ಣು ಸಾವಯವ ಅಂಶಗಳ ಕೊರತೆಯನ್ನು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ನಮ್ಮ ನೆಲೆದ ಮಣ್ಣಿಗೆ ಸಾವಯವ ಅಂಶವನ್ನು ಹೆಚ್ಚಿಸುವ ಪ್ರಯತ್ನಗಳಾಗದಿದ್ದರೆ ದೇಶವು ಗಂಭೀರವಾದ ಸುಸ್ಥಿರತೆಯ ಸಮಸ್ಯೆಯನ್ನು ಕಾಣುತ್ತದೆ ಎಂದು ತಿಳಿಸಿದೆ.

ಈ ಸಮಸ್ಯೆಗೆ ಪರಿಹಾರವಾಗಿ ಹಸುವಿನ ಸಗಣಿ ಗೊಬ್ಬರದ ಬಳಕೆಯನ್ನು ಉತ್ತೇಜಿಸಬೇಕು. ಇದರಿಂದಾಗಿ ದೀರ್ಘಕಾಲ ಮಣ್ಣಿನ ಫಲವತ್ತತೆಯ ಜೊತೆಗೆ ಗೋಶಾಲೆಗಳ ಆರ್ಥಿಕತೆಯ ಸುಧಾರಣೆ, ನೈಸರ್ಗಿಕ ಕೃಷಿಗೆ ಬೆಂಬಲ ಮತ್ತು ಕೃಷಿಯ ಸುಸ್ಥಿರತೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಹಸುವಿನ ಸಗಣಿ ಮತ್ತು ಗೋಮೂತ್ರವನ್ನು ಕೃಷಿಯಲ್ಲಿ ಸಸ್ಯ ಪೋಷಕಾಂಶಗಳ ಪೂರಕವಾಗಿ ಬಳಸಲು ಪ್ರೋತ್ಸಾಹಿಸಬೇಕು. ಅಲ್ಲದೆ, ಕೆಲವು ಅನುಪಾತದಲ್ಲಿ ಅಜೈವಿಕ ಮತ್ತು ಸಾವಯವ ಗೊಬ್ಬರವನ್ನು ಮಾರಾಟ ಮಾಡಲು ರಸಗೊಬ್ಬರ ಮಾರಾಟ ಮತ್ತು ಉತ್ಪಾದನಾ ಏಜೆನ್ಸಿಗಳನ್ನು ಕಡ್ಡಾಯಗೊಳಿಸಲು ನವೀನ ಕಾರ್ಯವಿಧಾನವನ್ನು ಜಾರಿಗೆ ತರಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

5 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

12 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

19 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

19 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

19 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

19 hours ago