ಸುದ್ದಿಗಳು

ಮಣ್ಣಿನ ಫಲವತ್ತತೆಗೆ ಗೋಮೂತ್ರ ಮತ್ತು ಸಗಣಿ ಸಹಕಾರಿ: ನೀತಿ ಆಯೋಗ ಶಿಫಾರಸ್ಸು : ಸಾವಯವ ಕೃಷಿಯ ಪ್ರಾಮುಖ್ಯತೆ ಎತ್ತಿ ಹಿಡಿದ ನೀತಿ ಆಯೋಗ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗೆ ರಾಸಾಯನಿಕ ಕೃಷಿ ಪದ್ಧತಿಗಿಂತ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೆಚ್ಚಿನ ರೈತರಿಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ. ಆದರೂ ನಮ್ಮ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಂಡಿದೆ. ಹೀಗೆ ಮುಂದುವರೆದರೆ ಮುಂದೊಂದು ದಿನ ಮಣ್ಣು ಮಣ್ಣಾಗಿ ಉಳಿದಿರಲ್ಲ. ಫಲವತ್ತತೆಯನ್ನು ಕಳೆದುಕೊಂಡು ನಿಸ್ತೇಜವಾಗಿ ಬಿಡುತ್ತದೆ. ಇದೀಗ ನೀತಿ ಆಯೋಗ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ನೀತಿ ಆಯೋಗವು ಸಾವಯವ ಹಾಗೂ ಜೈವಿಕ ರಸಗೊಬ್ಬರದ ಉತ್ಪಾದನೆ ಹಾಗೂ ಉತ್ತೇಜನದ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯ ಹೆಚ್ಚಳಕ್ಕೆ ಗೋಶಾಲೆಗಳ ಮೇಲೆ ಹೆಚ್ಚಿನ ಗಮನ’ ಎಂಬ ವರದಿಯನ್ನು ಬಿಡುಗಡೆ ಮಾಡಿದ್ದು “ಗೋಮೂತ್ರ ಹಾಗೂ ಸಗಣಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ” ಎಂದು ತಿಳಿಸಿದೆ. ಈ ಮೂಲಕ ಸಾವಯವ ಕೃಷಿಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸದಸ್ಯರನ್ನು ಒಳಗೊಂಡ 17 ಸದಸ್ಯರ ನೀತಿ ಆಯೋಗದ ಕಾರ್ಯಪಡೆಯು (NITI Aayog Task Force) ತನ್ನ ವರದಿಯಲ್ಲಿ ಭಾರತದ ಮಣ್ಣು ಸಾವಯವ ಅಂಶಗಳ ಕೊರತೆಯನ್ನು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ನಮ್ಮ ನೆಲೆದ ಮಣ್ಣಿಗೆ ಸಾವಯವ ಅಂಶವನ್ನು ಹೆಚ್ಚಿಸುವ ಪ್ರಯತ್ನಗಳಾಗದಿದ್ದರೆ ದೇಶವು ಗಂಭೀರವಾದ ಸುಸ್ಥಿರತೆಯ ಸಮಸ್ಯೆಯನ್ನು ಕಾಣುತ್ತದೆ ಎಂದು ತಿಳಿಸಿದೆ.

ಈ ಸಮಸ್ಯೆಗೆ ಪರಿಹಾರವಾಗಿ ಹಸುವಿನ ಸಗಣಿ ಗೊಬ್ಬರದ ಬಳಕೆಯನ್ನು ಉತ್ತೇಜಿಸಬೇಕು. ಇದರಿಂದಾಗಿ ದೀರ್ಘಕಾಲ ಮಣ್ಣಿನ ಫಲವತ್ತತೆಯ ಜೊತೆಗೆ ಗೋಶಾಲೆಗಳ ಆರ್ಥಿಕತೆಯ ಸುಧಾರಣೆ, ನೈಸರ್ಗಿಕ ಕೃಷಿಗೆ ಬೆಂಬಲ ಮತ್ತು ಕೃಷಿಯ ಸುಸ್ಥಿರತೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಹಸುವಿನ ಸಗಣಿ ಮತ್ತು ಗೋಮೂತ್ರವನ್ನು ಕೃಷಿಯಲ್ಲಿ ಸಸ್ಯ ಪೋಷಕಾಂಶಗಳ ಪೂರಕವಾಗಿ ಬಳಸಲು ಪ್ರೋತ್ಸಾಹಿಸಬೇಕು. ಅಲ್ಲದೆ, ಕೆಲವು ಅನುಪಾತದಲ್ಲಿ ಅಜೈವಿಕ ಮತ್ತು ಸಾವಯವ ಗೊಬ್ಬರವನ್ನು ಮಾರಾಟ ಮಾಡಲು ರಸಗೊಬ್ಬರ ಮಾರಾಟ ಮತ್ತು ಉತ್ಪಾದನಾ ಏಜೆನ್ಸಿಗಳನ್ನು ಕಡ್ಡಾಯಗೊಳಿಸಲು ನವೀನ ಕಾರ್ಯವಿಧಾನವನ್ನು ಜಾರಿಗೆ ತರಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

10 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

11 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

11 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

12 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

12 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

12 hours ago