Advertisement
ಸುದ್ದಿಗಳು

ಮಣ್ಣಿನ ಫಲವತ್ತತೆಗೆ ಗೋಮೂತ್ರ ಮತ್ತು ಸಗಣಿ ಸಹಕಾರಿ: ನೀತಿ ಆಯೋಗ ಶಿಫಾರಸ್ಸು : ಸಾವಯವ ಕೃಷಿಯ ಪ್ರಾಮುಖ್ಯತೆ ಎತ್ತಿ ಹಿಡಿದ ನೀತಿ ಆಯೋಗ

Share

ಇತ್ತೀಚೆಗೆ ರಾಸಾಯನಿಕ ಕೃಷಿ ಪದ್ಧತಿಗಿಂತ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೆಚ್ಚಿನ ರೈತರಿಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ. ಆದರೂ ನಮ್ಮ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಂಡಿದೆ. ಹೀಗೆ ಮುಂದುವರೆದರೆ ಮುಂದೊಂದು ದಿನ ಮಣ್ಣು ಮಣ್ಣಾಗಿ ಉಳಿದಿರಲ್ಲ. ಫಲವತ್ತತೆಯನ್ನು ಕಳೆದುಕೊಂಡು ನಿಸ್ತೇಜವಾಗಿ ಬಿಡುತ್ತದೆ. ಇದೀಗ ನೀತಿ ಆಯೋಗ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ನೀತಿ ಆಯೋಗವು ಸಾವಯವ ಹಾಗೂ ಜೈವಿಕ ರಸಗೊಬ್ಬರದ ಉತ್ಪಾದನೆ ಹಾಗೂ ಉತ್ತೇಜನದ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯ ಹೆಚ್ಚಳಕ್ಕೆ ಗೋಶಾಲೆಗಳ ಮೇಲೆ ಹೆಚ್ಚಿನ ಗಮನ’ ಎಂಬ ವರದಿಯನ್ನು ಬಿಡುಗಡೆ ಮಾಡಿದ್ದು “ಗೋಮೂತ್ರ ಹಾಗೂ ಸಗಣಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ” ಎಂದು ತಿಳಿಸಿದೆ. ಈ ಮೂಲಕ ಸಾವಯವ ಕೃಷಿಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಸದಸ್ಯರನ್ನು ಒಳಗೊಂಡ 17 ಸದಸ್ಯರ ನೀತಿ ಆಯೋಗದ ಕಾರ್ಯಪಡೆಯು (NITI Aayog Task Force) ತನ್ನ ವರದಿಯಲ್ಲಿ ಭಾರತದ ಮಣ್ಣು ಸಾವಯವ ಅಂಶಗಳ ಕೊರತೆಯನ್ನು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ನಮ್ಮ ನೆಲೆದ ಮಣ್ಣಿಗೆ ಸಾವಯವ ಅಂಶವನ್ನು ಹೆಚ್ಚಿಸುವ ಪ್ರಯತ್ನಗಳಾಗದಿದ್ದರೆ ದೇಶವು ಗಂಭೀರವಾದ ಸುಸ್ಥಿರತೆಯ ಸಮಸ್ಯೆಯನ್ನು ಕಾಣುತ್ತದೆ ಎಂದು ತಿಳಿಸಿದೆ.

ಈ ಸಮಸ್ಯೆಗೆ ಪರಿಹಾರವಾಗಿ ಹಸುವಿನ ಸಗಣಿ ಗೊಬ್ಬರದ ಬಳಕೆಯನ್ನು ಉತ್ತೇಜಿಸಬೇಕು. ಇದರಿಂದಾಗಿ ದೀರ್ಘಕಾಲ ಮಣ್ಣಿನ ಫಲವತ್ತತೆಯ ಜೊತೆಗೆ ಗೋಶಾಲೆಗಳ ಆರ್ಥಿಕತೆಯ ಸುಧಾರಣೆ, ನೈಸರ್ಗಿಕ ಕೃಷಿಗೆ ಬೆಂಬಲ ಮತ್ತು ಕೃಷಿಯ ಸುಸ್ಥಿರತೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಹಸುವಿನ ಸಗಣಿ ಮತ್ತು ಗೋಮೂತ್ರವನ್ನು ಕೃಷಿಯಲ್ಲಿ ಸಸ್ಯ ಪೋಷಕಾಂಶಗಳ ಪೂರಕವಾಗಿ ಬಳಸಲು ಪ್ರೋತ್ಸಾಹಿಸಬೇಕು. ಅಲ್ಲದೆ, ಕೆಲವು ಅನುಪಾತದಲ್ಲಿ ಅಜೈವಿಕ ಮತ್ತು ಸಾವಯವ ಗೊಬ್ಬರವನ್ನು ಮಾರಾಟ ಮಾಡಲು ರಸಗೊಬ್ಬರ ಮಾರಾಟ ಮತ್ತು ಉತ್ಪಾದನಾ ಏಜೆನ್ಸಿಗಳನ್ನು ಕಡ್ಡಾಯಗೊಳಿಸಲು ನವೀನ ಕಾರ್ಯವಿಧಾನವನ್ನು ಜಾರಿಗೆ ತರಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

2 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

2 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

7 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

7 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

7 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

22 hours ago