Advertisement
MIRROR FOCUS

ಸಿಪಿಸಿಆರ್‌ಐ ವತಿಯಿಂದ ಕ್ಷೇತ್ರೋತ್ಸವ | ಅಡಿಕೆ ಕೃಷಿಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಬಗ್ಗೆ ಮಾಹಿತಿ | ಕೃಷಿ ವಿಸ್ತಾರಕ್ಕಿಂತ ಕೃಷಿ ಸುದೃಢತೆ ಮುಖ್ಯ – ಟಿ ಆರ್‌ ಸುರೇಶ್ಚಂದ್ರ ತೊಟ್ಟೆತ್ತೋಡಿ |

Share

ದೇಶದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಯುವಕರೂ ಕೃಷಿಗೆ ಬರುತ್ತಿದ್ದಾರೆ. ಈಗ ಕೃಷಿ ವಿಸ್ತಾರದ ಬದಲಿಗೆ ಕೃಷಿ ಸುದೃಢತೆಯ ಅವಶ್ಯಕತೆ ಇದೆ. ಇದಕ್ಕಾಗಿ ತಾಂತ್ರಿಕ ಮಾಹಿತಿಗಳು ಕೃಷಿಕನಿಗೆ ಲಭ್ಯವಾಗಬೇಕು ಎಂದು ಕಲ್ಮಡ್ಕದ ಕೃಷಿಕ ಸುರೇಶ್ಚಂದ್ರ ತೊಟ್ಟೆತ್ತೋಡಿ ಹೇಳಿದರು.

ಅವರು ಶುಕ್ರವಾರ ಕೌಡಿಚ್ಚಾರಿನ ಗುಂಡ್ಯಡ್ಕ ವಾಸು ಪೂಜಾರಿಯವರ ಮನೆಯಲ್ಲಿ ವಿಟ್ಲ ಸಿಪಿಸಿಆರ್‌ಐ ಹಾಗೂ ಅಡಿಕೆ ಕೃಷಿಕರ ಸಂಯುಕ್ತ ಆಶ್ರಯದಲ್ಲಿ ನಡೆದ “ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ” ಕುರಿತು ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುವ ದಿನಗಳು ಬರಬೇಕು. ಕೃಷಿ ಸಮಸ್ಯೆಗಳಿಗೆ, ಕೃಷಿ ರೋಗಗಳಿಗೆ ಪರಿಹಾರಗಳು ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಲಭ್ಯವಾಗಬೇಕು. ಈಗ ಅಂತಹ ಕಾರ್ಯಗಳನ್ನು ವಿಜ್ಞಾನಿಗಳು ಮಾಡುತ್ತಿದ್ದಾರೆ.

ಮುಖ್ಯ ಅತಿಥಿಗಳಾಗಿದ್ದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿ, ಭಾರತದಲ್ಲಿ ಕೃಷಿ ಕ್ಷೇತ್ರ ಬೆಳವಣಿಗೆಯ ಹಾದಿಯಲ್ಲಿದೆ.ಯುವಕರು ಕೃಷಿಗೆ ಆಗಮಿಸುವ ಸಂದರ್ಭ ವೈಜ್ಞಾನಿಕವಾದ, ತಾಂತ್ರಿಕವಾದ ಮಾಹಿತಿಗಳು ಕ್ಷಣದಲ್ಲಿ ದೊರೆಯುವ ಕೆಲಸ ಆಗಬೇಕಿದೆ. ಇದೀಗ ವಿಜ್ಞಾನಿಗಳ ತಂಡವು ಸಕ್ರಿಯವಾಗಿದೆ. ರೈತರ ಬಳಿಗೆ ಆಗಮಿಸಿ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ವಿಟ್ಲ ಸಿಪಿಸಿಆರ್‌ಐ ಮುಖ್ಯಸ್ಥ ಡಾ.ಸಿ.ಟಿ.ಜೋಸ್‌ ಮಾತನಾಡಿ, ಅಡಿಕೆಗೆ ಧಾರಣೆ ಇರುವ ಈ ಸಮಯದಲ್ಲಿ ಕೃಷಿಕರಿಗೆ ಕೌಶಲ್ಯಯುಕ್ತ ಕಾರ್ಮಿಕರ ಅಗತ್ಯವೂ ಇದೆ. ಇದಕ್ಕಾಗಿ ಕೃಷಿಕರಿಗೆ ಹಾಗೂ ಕಾರ್ಮಿಕರಿಗೆ ತರಬೇತಿ ಅಗತ್ಯವಿದೆ. ಈಗಾಗಲೇ ಅಡಿಕೆಗೆ ಹೊಸ ಹೊಸ ರೋಗಗಳು ಕಂಡುಬರುತ್ತಿದೆ.ಇದನ್ನು ಪತ್ತೆ ಮಾಡಿ ಸೂಕ್ತ ಪರಿಹಾರ ಮಾರ್ಗಗಳನ್ನು ಸಂಸ್ಥೆಯ ಯುವ ವಿಜ್ಞಾನಿಗಳ ತಂಡ ಮಾಡುತ್ತಿದೆ ಎಂದರು.

ವೇದಿಕೆಯಲ್ಲಿ ಕೃಷಿಕರಾದ ಗುಂಡ್ಯಡ್ಕ ವಾಸು ಪೂಜಾರಿ, ಜಗನ್ನಾಥ ಶೆಟ್ಟಿ ಹಾಗೂ ಅರಿಯಡ್ಕ ಗ್ರಾ ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ, ಹಿರಿಯ ವಿಜ್ಞಾನಿ ಡಾ.ಎಲ್ವಿನ್‌ ಅಪ್ಸರಾ  ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಅಡಿಕೆಯ ಸುಧಾರಿತ ತಳಿಗಳ ಬಗ್ಗೆ ಹಾಗೂ ಅಡಿಕೆ ತೋಟ ನಿರ್ವಹಣೆ ಬಗ್ಗೆ ಡಾ.ಭವಿಷ್ಯ , ಅಡಿಕೆ-ಕಾಳುಮೆಣಸು-ಜಾಯಿಕಾಯಿ ಮಿಶ್ರ ಕೃಷಿ ಬಗ್ಗೆ ಕೃಷಿಕ ಸುರೇಶ್ಚಂದ್ರ ತೊಟ್ಟೆತೋಡಿ ಮಾಹಿತಿ ನೀಡಿದರು.
ಅಡಿಕೆ ಬೇರು ಹುಳು ಹಾಗೂ ಮೈಟ್‌ ಮತ್ತು ಇತರ ರೋಗಗಳ ಬಗ್ಗೆ ಡಾ.ರಾಜ್‌ ಕುಮಾರ್‌, ಹಿಂಗಾರ ಒಣಗುವ ರೋಗ, ಎಲೆಚುಕ್ಕಿರೋಗದ ಬಗ್ಗೆ ಡಾ.ಥವಾಪ್ರಕಾಶ್‌ ಪಾಂಡ್ಯನ್‌, ಡಾ.ಶಿವಾಜಿ ತುಬೆ ಮಾಹಿತಿ ನೀಡಿದರು. ಹಿಂಗಾರ ಒಣಗುವ ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ಅನುಭವಿ ಕೃಷಿಕ ವಿಷ್ಣು ಭಟ್‌ ಮಾಹಿತಿ ನೀಡಿದರು. ಬಳಿಕ ಬೋರ್ಡೋ ತಯಾರಿ ಬಗ್ಗೆ ಪುರಂದರ ಚಂದಳಿಕೆ, ಕಾರ್ಬನ್‌ ಫೈಬರ್‌ ದೋಟಿ ಬಳಸಿ ಸಿಂಪಡಣೆ ಹಾಗೂ ಕೊಯ್ಲು ಬಗ್ಗೆ ಸುಬ್ರಹ್ಮಣ್ಯ ಭಟ್‌ ಕೈಲಾರು ಮತ್ತು ಗೋಣಿಗೊನೆಯ ಬಗ್ಗೆ ಕೃಷಿಕ ಸುಭಾಶ್‌ ಮುಂಡ್ಯ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ವಿಟ್ಲ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಸ್ವಾಗತಿಸಿ ತಾಂತ್ರಿಕ ಕೃಷಿ ಸಲಹೆಗಾರ ಪುರಂದರ ಚಂದಳಿಕೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

21 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago