Advertisement
ಸುದ್ದಿಗಳು

ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಅಡಿಕೆ ತೋಟಗಳಿಗೆ ಭೇಟಿ |  ಹಳದಿಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್‌ ಹೊದಿಕೆ | ವಿಜ್ಞಾನಿಗಳಿಂದ ಕಲ್ಮಕಾರು, ಮರ್ಕಂಜ ಭೇಟಿ |

Share

ಅಡಿಕೆ ಹಳದಿ ಎಲೆರೋಗ ವಿಸ್ತರಣೆ ತಡೆಗೆ ಹಾಗೂ ಹಳದಿ ಎಲೆ ರೋಗ ಬಾಧಿತ ಅಡಿಕೆ ಮರಗಳಿಗೆ ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಅಳವಡಿಕೆ ಮಾಡಿದ್ದ ಪ್ಲಾಸ್ಟಿಕ್‌ ಹೊದಿಕೆಗಳ ವೀಕ್ಷಣೆ ಹಾಗೂ ಅಧ್ಯಯನ ವರದಿಯ ಬಗ್ಗೆ ಬೆಳೆಗಾರರಿಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಸೋಮವಾರ ಮಾಹಿತಿ ನೀಡಿದರು.

ಕಳೆದ ಹಲವಾರು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ಬಾಧಿತ ಪ್ರದೇಶಗಳಲ್ಲಿ ಅಧ್ಯಯನ ಹಾಗೂ ಸಂಶೋಧನೆಯ ದೃಷ್ಟಿಯಿಂದ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಅಡಿಕೆ ತೋಟದಲ್ಲಿ ಪ್ಲಾಸ್ಟಿಕ್‌ ಹೊದಿಕೆ ಅಳವಡಿಕೆ ಮಾಡಿತ್ತು. ಐದು ವರ್ಷಗಳ ಹಿಂದೆ ಕಲ್ಮಕಾರಿನ ಒಂದು ತೋಟದಲ್ಲಿ ಹಾಗೂ ಮರ್ಕಂಜದ ಎರಡು ತೋಟ ಹಾಗೂ ಶೃಂಗೇರಿಯಲ್ಲಿ ಪ್ಲಾಸ್ಟಿಕ್‌ ಹೊದಿಕೆ ಹೊದಿಸಿ ಪೋಷಕಾಂಶಗಳ ನಿರ್ವಹಣೆ ಹಾಗೂ ಇತರ ಅಧ್ಯಯನ ನಡೆಸಿದ್ದರು. ಇದೀಗ ಐದು ವರ್ಷಗಳ ನಂತರ ಈ ಅಧ್ಯಯನ ವರದಿ ಪ್ರಕಾರ ಅಡಿಕೆ ಹಳದಿ ಎಲೆರೋಗ ವಿಸ್ತರಣೆ ಕಡಿಮೆಯಾಗಿದೆ ಹಾಗೂ ಪೋಷಕಾಂಶಗಳು ಮರಗಳಿಗೆ ಸರಿಯಾಗಿ ಲಭ್ಯವಾಗುವುದರಿಂದ ಮರಗಳ ಬೇರು ಆರೋಗ್ಯಯುತವಾಗಿರುವುದು ಕಂಡುಬಂದಿದೆ ಎಂದು ವಿಜ್ಞಾನಿಗಳ ತಂಡ ಕಂಡುಕೊಂಡಿದೆ.

 

ಇದೀಗ ಈ ಅಧ್ಯಯನದ ಜೊತೆಗೆ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ರೋಗ ನಿರೋಧಕ ತಳಿ ಅಭಿವೃದ್ಧಿ ಹಾಗೂ ಟಿಶ್ಯೂ ಕಲ್ಚರ್‌ ಗಿಡಗಳನ್ನೂ ಅಭಿವೃದ್ಧಿ ಮಾಡಲು ಸಿಪಿಸಿಆರ್‌ಐ ವಿಜ್ಞಾನಿಗಳು ಮುಂದೆ ಬಂದಿದ್ದಾರೆ ಎಂದು ಸಿಪಿಸಿಆರ್‌ಐ ನಿರ್ದೇಶಕಿ ಡಾ.ಅನಿತಾ ಕರುಣ್‌ ತಿಳಿಸಿದ್ದಾರೆ.

ಸೋಮವಾರ ಕಲ್ಮಕಾರಿನ ನವೀನ್‌ ದಂಬೆಕೋಡಿ ಅವರ ತೋಟ ಹಾಗೂ ಮರ್ಕಂಜದ ಪವಿತ್ರ ಗುಂಡಿ ಅವರ ಅಡಿಕೆ ತೋಟಗಳಿಗೆ ಅಳವಡಿಸಿದ್ದ ಪ್ಲಾಸ್ಟಿಕ್‌ ಹೊದಿಕೆಗಳನ್ನು ವಿಜ್ಞಾನಿಗಳ ತಂಡ ವೀಕ್ಷಿಸಿದರು. ಸಿಪಿಸಿಆರ್‌ಐ ವಿಜ್ಞಾನಿಗಳ ತಂಡದಲ್ಲಿ ಸಿಪಿಸಿಆರ್‌ಐ ಕಾಸರಗೋಡು ನಿರ್ದೇಶಕಿ ಡಾ.ಅನಿತಾ ಕರುಣ್‌ , ಸಮಾಜವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಮುರಳೀಧರನ್, ಬೆಳೆಉತ್ಪಾದನಾ ವಿಭಾಗದ ಮುಖ್ಯಸ್ಥ ಡಾ.ರವಿ ಭಟ್, ಬೆಳೆಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗಡೆ , ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಇದ್ದರು.

ಈ ಸಂದರ್ಭ ಬೆಳೆಗಾರರೊಂದಿಗೆ ಮಾತುಕತೆ ನಡೆಸಿದ ವಿಜ್ಞಾನಿಗಳ ತಂಡ ಅಡಿಕೆ ಬೆಳೆಗಾರರ ಅಭಿಪ್ರಾಯ ಪಡೆದರು. ಈ ಸಂದರ್ಭ ಕಲ್ಮಕಾರು ಗ್ರಾಪಂ ಅಧ್ಯಕ್ಷ ಉದಯಕುಮಾರ್‌ ಕೊಪ್ಪಡ್ಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಸ್ಥಳೀಯರಾದ ಕೆ ಸಿ ಸುಬ್ರಹ್ಮಣ್ಯ ಕೊಪ್ಪಡ್ಕ, , ಕೆಪಿ ಚಂದ್ರಶೇಖರ್‌ ಕೊಪ್ಪಡ್ಕ, ಬಾಲಕೃಷ್ಣ ಕೊಪ್ಪಡ್ಕ , ಮೋಹನ ಉಳುವಾಲು, ಡ್ಯಾನಿ ಆಲದಾಳು, ನರೇಂದ್ರ ಬಿಳಿಮಲೆ, ಗಂಗಾಧರ ಇಡ್ಯಡ್ಕ, ಮೊದಲಾದವರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 hour ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

12 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

14 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago