ಸುದ್ದಿಗಳು

ಫೆ.4 | ಕೌಡಿಚ್ಚಾರಿನಲ್ಲಿ ಅಡಿಕೆಯ ಪೋಷಕಾಂಶ ನಿರ್ವಹಣೆಯ ಸರಿಯಾದ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ವಿಟ್ಲದ ಸಿ.ಪಿ.ಸಿ.ಆರ್.ಐ. ಸಂಸ್ಥೆಯ ವತಿಯಿಂದ ಫೆ.4 ರಂದು ಪುತ್ತೂರು ತಾಲೂಕು ಕೌಡಿಚ್ಚಾರಿನ ಗುಂಡ್ಯಡ್ಕ ವಾಸು ಪೂಜಾರಿಯವರ ತೋಟದಲ್ಲಿ ಕ್ಷೇತ್ರೋತ್ಸವ ಮತ್ತು ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ವಿಟ್ಲ ಸಿ.ಪಿ.ಸಿ.ಆರ್.ಐ ಮುಖ್ಯಸ್ಥ ಡಾ.ಸಿ ಟಿ ಜೋಸ್‌ ತಿಳಿಸಿದ್ದಾರೆ.

Advertisement

ಅಡಿಕೆಯ ಪೋಷಕಾಂಶ ನಿರ್ವಹಣೆಯ ಸರಿಯಾದ ಕ್ರಮಗಳು ಮತ್ತು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿರುವ ಎಲೆಚುಕ್ಕೆ ಮತ್ತು ಸಿಂಗಾರ ಒಣಗುವ ರೋಗ ಸೇರಿದಂತೆ ಇನ್ನಿತರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ತಜ್ಞರಿಂದ ಮಾಹಿತಿ ದೊರೆಯಲಿದೆ. ಅಲ್ಲದೆ, ಔಷಧಿ ಸಿಂಪರಣೆ ಮತ್ತು ಅಡಿಕೆ ಗೊನೆ ಕೊಯ್ಲು ಮಾಡಲು ಇತ್ತೀಚೆಗೆ ಪ್ರಚಲಿತಕ್ಕೆ ಬಂದಿರುವ ಕಾರ್ಬನ್ ಫೈಬರ್ ದೋಟಿಯ ಪ್ರಾತ್ಯಕ್ಷಿಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅಡಿಕೆಯಲ್ಲಿ ಪೋಷಕಾಂಶ ನಿರ್ವಹಣೆ: ಮರದ ಆರೋಗ್ಯ ವೃದ್ಧಿಸುವ ಸಲುವಾಗಿ ಅನುಸರಿಸಬೇಕಾದ ಕ್ರಮಗಳು, ಎಲೆಚುಕ್ಕೆ, ಹಿಂಗಾರ ಒಣಗುವಿಕೆ, ಬುಡ ಕೊಳೆ, ಕುಬೆ ಕೊಳೆ ಸೇರಿದಂತೆ ಇನ್ನಿತರ ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ, ಮೈಟ್, ಪೆಂತಿ ಕೀಟ, ಬೇರು ಹುಳ ಮತ್ತು ಇನ್ನಿತರ ಕೀಟಗಳ ನಿರ್ವಹಣೆ ಬಗ್ಗೆ ಮಾಹಿತಿ ಹಾಗೂ ಅಡಿಕೆಯಲ್ಲಿ ಇತ್ತೀಚೆಗೆ ಹೊಸದಾಗಿ ಕಂಡುಬರುತ್ತಿರುವ ರೋಗ, ಕೆಂಪು ಮೂತಿಯ ಹುಳ, ಬೇರು ಕೊಳೆಗಳ ನಿರ್ವಹಣೆ ಹಾಗೂ ಅಡಿಕೆಯೊಂದಿಗೆ ಮಿಶ್ರ ಬೆಳೆಯಾಗಿ ಕಾಳುಮೆಣಸು ಮತ್ತು ಜಾಯಿಕಾಯಿಯನ್ನು ಯಶಸ್ವಿಯಾಗಿ ಬೆಳೆದ ಮತ್ತು ಸಿಂಗಾರ ಒಣಗುವ ರೋಗವನ್ನು ಹತೋಟಿ ಮಾಡಿದ ಕೃಷಿಕರ ಅನುಭವದ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ.

ಇದೇ ವೇಳೆ ಕಾರ್ಬನ್ ಫೈಬರ್ ದೋಟಿ ಬಳಸಿ ಔಷಧ ಸಿಂಪಡಣೆ ಮತ್ತು ಕೊಯ್ಲು,  ಗೋಣಿ ಚೀಲ ಬಳಸಿ ಗೊನೆ ಹಿಡಿಯುವಿಕೆ ಹಾಗೂ ಕೀಟ ಮತ್ತು ರೋಗಗಳ ಜೀವಂತ ಮಾದರಿಗಳು ಮತ್ತು ಪರಿಣಿತರಿಂದ ಸಮಗ್ರ ಮಾಹಿತಿ ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು ವಿಟ್ಲದ ಸಿ.ಪಿ.ಸಿ ಆರ್.ಐ ಸಂಸ್ಥೆಯ ಮುಖ್ಯಸ್ಥ ಡಾ. ಸಿ. ಟಿ. ಜೋಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಅನುಭವಿ ಕೃಷಿಕ  ಸುರೇಶ್ಚಂದ್ರ ತೊಟ್ಟೆತೋಡಿ ಉದ್ಘಾಟಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಿ.ಪಿ.ಸಿ.ಆರ್.ಐ ವಿಜ್ಞಾನಿ ಭವಿಷ್ಯ (9538346917)ರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

3 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

6 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

6 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

9 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago