Advertisement
ಸುದ್ದಿಗಳು

ಫೆ.4 | ಕೌಡಿಚ್ಚಾರಿನಲ್ಲಿ ಅಡಿಕೆಯ ಪೋಷಕಾಂಶ ನಿರ್ವಹಣೆಯ ಸರಿಯಾದ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Share

ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ವಿಟ್ಲದ ಸಿ.ಪಿ.ಸಿ.ಆರ್.ಐ. ಸಂಸ್ಥೆಯ ವತಿಯಿಂದ ಫೆ.4 ರಂದು ಪುತ್ತೂರು ತಾಲೂಕು ಕೌಡಿಚ್ಚಾರಿನ ಗುಂಡ್ಯಡ್ಕ ವಾಸು ಪೂಜಾರಿಯವರ ತೋಟದಲ್ಲಿ ಕ್ಷೇತ್ರೋತ್ಸವ ಮತ್ತು ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ವಿಟ್ಲ ಸಿ.ಪಿ.ಸಿ.ಆರ್.ಐ ಮುಖ್ಯಸ್ಥ ಡಾ.ಸಿ ಟಿ ಜೋಸ್‌ ತಿಳಿಸಿದ್ದಾರೆ.

ಅಡಿಕೆಯ ಪೋಷಕಾಂಶ ನಿರ್ವಹಣೆಯ ಸರಿಯಾದ ಕ್ರಮಗಳು ಮತ್ತು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿರುವ ಎಲೆಚುಕ್ಕೆ ಮತ್ತು ಸಿಂಗಾರ ಒಣಗುವ ರೋಗ ಸೇರಿದಂತೆ ಇನ್ನಿತರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ತಜ್ಞರಿಂದ ಮಾಹಿತಿ ದೊರೆಯಲಿದೆ. ಅಲ್ಲದೆ, ಔಷಧಿ ಸಿಂಪರಣೆ ಮತ್ತು ಅಡಿಕೆ ಗೊನೆ ಕೊಯ್ಲು ಮಾಡಲು ಇತ್ತೀಚೆಗೆ ಪ್ರಚಲಿತಕ್ಕೆ ಬಂದಿರುವ ಕಾರ್ಬನ್ ಫೈಬರ್ ದೋಟಿಯ ಪ್ರಾತ್ಯಕ್ಷಿಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಅಡಿಕೆಯಲ್ಲಿ ಪೋಷಕಾಂಶ ನಿರ್ವಹಣೆ: ಮರದ ಆರೋಗ್ಯ ವೃದ್ಧಿಸುವ ಸಲುವಾಗಿ ಅನುಸರಿಸಬೇಕಾದ ಕ್ರಮಗಳು, ಎಲೆಚುಕ್ಕೆ, ಹಿಂಗಾರ ಒಣಗುವಿಕೆ, ಬುಡ ಕೊಳೆ, ಕುಬೆ ಕೊಳೆ ಸೇರಿದಂತೆ ಇನ್ನಿತರ ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ, ಮೈಟ್, ಪೆಂತಿ ಕೀಟ, ಬೇರು ಹುಳ ಮತ್ತು ಇನ್ನಿತರ ಕೀಟಗಳ ನಿರ್ವಹಣೆ ಬಗ್ಗೆ ಮಾಹಿತಿ ಹಾಗೂ ಅಡಿಕೆಯಲ್ಲಿ ಇತ್ತೀಚೆಗೆ ಹೊಸದಾಗಿ ಕಂಡುಬರುತ್ತಿರುವ ರೋಗ, ಕೆಂಪು ಮೂತಿಯ ಹುಳ, ಬೇರು ಕೊಳೆಗಳ ನಿರ್ವಹಣೆ ಹಾಗೂ ಅಡಿಕೆಯೊಂದಿಗೆ ಮಿಶ್ರ ಬೆಳೆಯಾಗಿ ಕಾಳುಮೆಣಸು ಮತ್ತು ಜಾಯಿಕಾಯಿಯನ್ನು ಯಶಸ್ವಿಯಾಗಿ ಬೆಳೆದ ಮತ್ತು ಸಿಂಗಾರ ಒಣಗುವ ರೋಗವನ್ನು ಹತೋಟಿ ಮಾಡಿದ ಕೃಷಿಕರ ಅನುಭವದ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ.

ಇದೇ ವೇಳೆ ಕಾರ್ಬನ್ ಫೈಬರ್ ದೋಟಿ ಬಳಸಿ ಔಷಧ ಸಿಂಪಡಣೆ ಮತ್ತು ಕೊಯ್ಲು,  ಗೋಣಿ ಚೀಲ ಬಳಸಿ ಗೊನೆ ಹಿಡಿಯುವಿಕೆ ಹಾಗೂ ಕೀಟ ಮತ್ತು ರೋಗಗಳ ಜೀವಂತ ಮಾದರಿಗಳು ಮತ್ತು ಪರಿಣಿತರಿಂದ ಸಮಗ್ರ ಮಾಹಿತಿ ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು ವಿಟ್ಲದ ಸಿ.ಪಿ.ಸಿ ಆರ್.ಐ ಸಂಸ್ಥೆಯ ಮುಖ್ಯಸ್ಥ ಡಾ. ಸಿ. ಟಿ. ಜೋಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಅನುಭವಿ ಕೃಷಿಕ  ಸುರೇಶ್ಚಂದ್ರ ತೊಟ್ಟೆತೋಡಿ ಉದ್ಘಾಟಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಿ.ಪಿ.ಸಿ.ಆರ್.ಐ ವಿಜ್ಞಾನಿ ಭವಿಷ್ಯ (9538346917)ರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

8 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

2 days ago