Advertisement
ಸುದ್ದಿಗಳು

ದಕ ಜಿಲ್ಲೆಯಲ್ಲಿ ಸುಡು ಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ- ಅರ್ಜಿ ಆಹ್ವಾನ

Share

ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶಗಳಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಮಂಗಳೂರು ನಗರ  ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು.

Advertisement
Advertisement

ನವೆಂಬರ್ 11ರಿಂದ ನ.14ರ ವರೆಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮತ್ತು ನವೆಂಬರ್ 24ರಂದು ತುಳಸಿ ಪೂಜೆ ಹಬ್ಬದ ಸಂದರ್ಭದಲ್ಲಿ ಸುಡು ಮದ್ದು ಮತ್ತು ಮಾರಾಟದ ತಾತ್ಕಾಲಿಕ ಪರವಾನಿಗೆ ಪಡೆಯಲು ಅವಕಾಶವಿರುತ್ತದೆ.

ನವೆಂಬರ್ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ನಿಗದಿತ ನಮೂನೆ ಮುಂದೆ ನಮೂನೆ-5ರಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಾಸ್ತಾವಿತ ಜಮೀನಿನ ಪಹಣಿ ಸರ್ಕಾರಿ ಜಮೀನು ಅಲ್ಲದೆ ಇದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (20ರೂ.ಗಳ ಸ್ಟ್ಯಾಂಪ್ ಪೇಪರ್‍ನೊಂದಿಗೆ) ಹಾಗೂ ಸರ್ಕಾರಿ ಜಾಗವಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿ ಸಲ್ಲಿಸುವಾಗ 200 ರೂ.ಗಳ ಪರಿಶೀಲನಾ ಶುಲ್ಕ ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ 500 ರೂ.ಗಳ ಪರವಾನಿಗೆ ಶುಲ್ಕವನ್ನು ಪಾವತಿಸಬೇಕು. ಅರ್ಜಿದಾರರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆಯ ನಿರಾಕ್ಷೇಪಣ ಪತ್ರ, ಪೊಲೀಸ್ ಅಧೀಕ್ಷಕರ ನಿರಾಪೇಕ್ಷಾಣಾ ಪತ್ರ, ಸಂಬಂಧಪಟ್ಟ ತಹಶೀಲ್ದಾರರ ನಿರಾಕ್ಷೇಪನ ಪತ್ರ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ನಿರಾಕ್ಷಾಪಣಾ ಪತ್ರ ಸಲ್ಲಿಸಬೇಕು. ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ.

ಸಂಬಂಧಪಟ್ಟ ಇಲಾಖೆಗಳಿಂದ ನಿರಕ್ಷೇಪಣಾ ಪತ್ರ ಬಂದಲ್ಲಿ ಸ್ಪೋಟಕ ಕಾಯ್ದೆ ನಿಯಮಾವಳಿಗಳಿಗೆ ಒಳಪಟ್ಟು ಮತ್ತು ಕೋವಿಡ್-19 ಸರ್ಕಾರಿ ಮಾರ್ಗ ಸೂಚಿಗಳನ್ನು ಪಾಲಿಸುವ ಷರತ್ತುಗೆ ಒಳಪಟ್ಟು ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು. ನವೆಂಬರ್ 6ರ ನಂತರ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣವಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

18 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

18 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

18 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

19 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

19 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

19 hours ago