ಹುಟ್ಟಿದ ವ್ಯಕ್ತಿಗೆ ಸಾವು ಖಚಿತ. ಆದರೆ ಸಾವು ವಿಷಾದ ಭಾವ ಮೂಡಿಸುತ್ತದೆ. ಅಂತಹ ಸಮಯದಲ್ಲಿ ಕುಟುಂಬದ ಮಂದಿಗೆ ವ್ಯಕ್ತಿಯ ಶವಸಂಸ್ಕಾರ ಮಾಡುವುದು ಗ್ರಾಮೀಣ ಭಾಗದಲ್ಲಿ ಸವಾಲಿನ ಕೆಲಸವಾಗುತ್ತದೆ. ನಗರದಲ್ಲಿ ವಿದ್ಯುತ್ ಚಿತಾಗಾರಗಳು ಇರುತ್ತದೆ. ಗ್ರಾಮೀಣ ಭಾಗಗಳಲ್ಲಿ ಕಟ್ಟಿಗೆಗಳಿಗೆ ಅಲೆದಾಟ ಮಾಡಬೇಕಾದ ಸ್ಥಿತಿ ಹಲವು ಕಡೆಗಳಲ್ಲಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಶವಸಂಸ್ಕಾರದ ಪೆಟ್ಟಿಗೆ ಬಹು ಅನುಕೂಲವಾಗುತ್ತದೆ. ಪರಿಸರ ಸ್ನೇಹಿಯೂ ಆಗಿರುವ ಇಂತಹ ಪೆಟ್ಟಿಗೆಯೊಂದನ್ನು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರ ಸಂಘದಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಹಸ್ತಾಂತರ ಮಾಡಲಾಯಿತು.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ. ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡ್ತಲಕಜೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ. ಕೆ ಶರತ್,ನಿರ್ದೇಶಕರು ಸಿಬ್ಬಂದಿಗಳು ಹಾಗೂ ಟ್ರಸ್ಟ್ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…