Advertisement
ಸುದ್ದಿಗಳು

ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಆರ್​ಸಿಬಿಗೆ ದೊಡ್ಡ ಶಾಕ್: ಜೋಶ್ ಹ್ಯಾಜ್ಲೆವುಡ್ ಐಪಿಎಲ್​ನಿಂದ ಔಟ್

Share

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್​ಗೆ ಲಗ್ಗೆಯಿಡಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.
ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.
ಆರ್​ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.
ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್​ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್​ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.
ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್​ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್​ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago