ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡ ಸೆಣೆಸಾಟ ನಡೆಸಲಿದೆ. ಪ್ಲೇ ಆಫ್ಗೆ ಲಗ್ಗೆಯಿಡಲು ಆರ್ಸಿಬಿ ಈ ಪಂದ್ಯ ಗೆಲ್ಲಲೇ ಬೇಕು. ಆದರೆ, ಇದರ ನಡುವೆ ಫಾಫ್ ಪಡೆಗೆ ದೊಡ್ಡ ಆಘಾತ ಉಂಟಾಗಿದೆ.
ಆರ್ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್ನಿಂದ ಹೊರಬಿದ್ದಿದ್ದಾರೆ.
ಆರ್ಸಿಬಿ ಹಾಗೂ ಜಿಟಿ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬೆಂಗಳೂರು ತಂಡಕ್ಕೆ ಹಿನ್ನಡೆ ಆಗಿದೆ. ತಂಡದ ಸ್ಟಾರ್ ಬೌಲರ್ ಜೋಶ್ ಹ್ಯಾಜ್ಲೆವುಡ್ ಇಂದಿನ ಪಂದ್ಯ ಸೇರಿದಂತೆ ಐಪಿಎಲ್ನಿಂದ ಹೊರಬಿದ್ದಿದ್ದಾರೆ.
ಪಾದದ ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹ್ಯಾಜ್ಲೆವುಡ್ ಸಂಪೂರ್ಣ ಟೂರ್ನಿಯಿಂದ ಔಟ್ ಆಗಿದ್ದು, ಇಂದು ಅಥವಾ ನಾಳೆ ತವರಿಗೆ ಮರಳಲಿದ್ದಾರೆ ಎಂದು ವರದಿ ಆಗಿದೆ. ಆರ್ಸಿಬಿಯ ಪ್ರಮುಖ ಬೌಲರ್ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ನಷ್ಟ ಎಂದೇ ಹೇಳಬಹುದು.
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.
ಐಪಿಎಲ್ 2023 ಟೂರ್ನಿ ಆರಂಭಕ್ಕೂ ಮುನ್ನವೇ ಜೋಶ್ ಇಂಜುರಿಗೆ ತುತ್ತಾಗಿದ್ದರು. ಇವರು ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಕೂಡ ಹೊರಬಿದ್ದಿದ್ದರು. ಬಳಿಕ ಆರ್ಸಿಬಿ ಆರಂಭದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.
ಹ್ಯಾಜ್ಲೆವುಡ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿ ಆರ್ಸಿಬಿಯ ಎಂಟು ಪಂದ್ಯ ಮುಗಿದ ಬಳಿಕ ಕಣಕ್ಕಿಳಿದರು. ಆದರೆ, ಪುನಃ ಇವರಿಗೆ ಕಾಲಿನ ಹಿಂಭಾಗ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.
ಐಪಿಎಲ್ 2023 ಟೂರ್ನಿಯುದ್ದಕ್ಕೂ ರಾಯಲ್ ಚಾಲೆಂಜರ್ಸ್ ಇಂಜುರಿಯನ್ನು ಅನುಭವಿಸುತ್ತಲೇ ಬಂದಿದೆ. ಟೂರ್ನಿ ಆರಂಭವಾಗಿ ಕೆಲ ಪಂದ್ಯದ ಬಳಿಕ ಗಾಯದಿಂದ ಡೇವಿಡ್ ವಿಲ್ಲೆ ಹಾಗೂ ರೀಸೆ ಟೋಪ್ಲಿ ನಿರ್ಗಮಿಸಿದರೆ ಈಗ ಜೋಶ್ ಹ್ಯಾಜ್ಲೆವುಡ್ ತವರಿಗೆ ಮರಳಲು ಸಜ್ಜಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ಇಂದು ಸಂಜೆ 7.30 ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟಾಸ್ 7 ಗಂಟೆಗೆ ನಡೆಯಲಿದ್ದು, ಆರ್ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…