ಕುಕ್ಕೆಸುಬ್ರಹ್ಮಣ್ಯ-ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

January 17, 2024
8:20 PM
ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.

ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ  ಹಾಗೂ  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.

ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.

ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

Cricketer KL Rahul visited Kukke Subrahmanya and Dharmasthala.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror