ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ | ಐವರು ಆರೋಪಿಗಳ ಸೆರೆ

January 3, 2023
10:15 PM

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.

2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror